ಜಿಲ್ಲೆಗಳು

ಪಾಂಡವಪುರದಲ್ಲಿ 3 ದಿನಗಳ ಕಾಲ ಪುನಿತೋತ್ಸವ ಆಚರಣೆ

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು ನೆನೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಮೂರು ದಿನಗಳ ಪುನೀತೋತ್ಸವ ಆಚರಿಸಲಾಗುತ್ತಿದ್ದು, ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ನವೆಂಬರ್ 25, 26, 27 ಮೂರು ದಿನಗಳ‌ ಕಾಲ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಪುನೀತೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇಲುಕೋಟೆ ಶಾಸಕ ಪುಟ್ಟರಾಜು ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದಾರೆ. ಡಾ. ರಾಜ್ ಕುಟುಂಬದ ಮಾರ್ಗದರ್ಶನದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೂರು ದಿನಗಳ ಕಾಲ ಪಾಂಡವಪುರ ಜನತೆಗೆ ಭರಪೂರ ಮನರಂಜನೆ ಸಿಗಲಿದೆ.

ಈ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಸೇರಿದಂತೆ ರಾಜ್ ಕುಟುಂಬದ ಬಹುತೇಕ ಸದಸ್ಯರು ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಯಾಂಡಲ್‌ವುಡ್‌ನ ಖ್ಯಾತ ನಟ-ನಟಿಯರು ಆಗಮಿಸುತ್ತಿದ್ದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಜೊತೆಗೆ ಖ್ಯಾತ ಗಾಯಕರಾದ (Singers) ವಿಜಯ ಪ್ರಕಾಶ್, ಅನನ್ಯ ಭಟ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂರು ದಿನಗಳ ಕಾಲ ಮ್ಯೂಸಿಕಲ್ ನೈಟ್ (ಸಂಗೀತ ರಾತ್ರಿ) ನಡೆಸಿಕೊಡಲಿದ್ದಾರೆ.

 

 

andolana

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

7 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

8 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

8 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

9 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

10 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

11 hours ago