ಜಿಲ್ಲೆಗಳು

ಕೋಟೆಕೆರೆ : ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕುವಂತೆ ಗ್ರಾಪಂ ಮುಂಭಾಗ ಪ್ರತಿಭಟನೆ

ಕೋಟೆಕೆರೆ ಗ್ರಾಪಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ

ಬೇಗೂರು(ಗುಂಡ್ಲುಪೇಟೆ ತಾ.): ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮೀಪದ ಕೋಟೆಕೆರೆ ಗ್ರಾಮಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಸಮಾವೇಶಗೊಂಡ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಮೆರವಣಿಗೆ ನಡೆಸಿ, ನಂತರ ಗ್ರಾಪಂ ಕಚೇರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಾಗ ಸ್ಥಳಕ್ಕೆ ಆಗಮಿಸಿದ ತಾಪಂ ಇ.ಒ ಶ್ರೀಕಂಠರಾಜೇಅರಸ್, ಪಿಡಿಒ ಶಾಂತರಾಜು, ಸೆಸ್ಕ್ ಎ.ಇ.ಇ ರಾಮಚಂದ್ರ ರಾವ್, ಓಂಕಾರ ಅರಣ್ಯವಲಯದ ಆರ್.ಎಫ್.ಓ. ಸತೀಶ್ ಅವರನ್ನು ರೈತರು ತರಾಟೆಗೆ ತೆಗೆದುಕೊಂಡರು.
ಕಾಡಂಚಿನ ಗ್ರಾಮಗಳಿಗೆ ಕಾಡಾನೆ ಜಿಂಕೆ, ಕರಡಿ, ಚಿರತೆ ಸೇರಿದಂತೆ ಮತ್ತಿತರ ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು ಬೆಳೆಗಳನ್ನು ಹಾಳುಮಾಡುತ್ತಿವೆ. ಜೊತೆಗೆ ಸೂಕ್ತ ಪರಿಹಾರವೂ ಸಿಗುತ್ತಿಲ್ಲ. ರಾತ್ರಿವೇಳೆ ವಾಚರ್‌ಗಳು ಗಸ್ತು ತಿರುಗದೆ ಇರುವುದರಿಂದ ಕಾಡಾನೆಗಳು ಜಮೀನಿನತ್ತ ಧಾವಿಸಿ ಬೆಳೆಗಳನ್ನೆಲ್ಲ ತಿಂದುಹಾಕುತ್ತಿವೆ ಎಂದು ಆರೋಪಿಸಿದರು.

ರೈತರ ನೀರಾವರಿ ಜಮೀನಿಗೆ ಟಿ.ಸಿ.ದುರಸ್ತ್ತಿಗೆ 10 ರಿಂದ 15 ದಿನ ಕಾಯಿಸುವುದರಿಂದ ಬೆಳೆ ಒಣಗಿಹೋಗುತ್ತದೆ. ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಓ ಅವರು ಗ್ರಾಮಕ್ಕೆ ಸೌಲಭ್ಯವನ್ನು ಒದಗಿಸುವಲ್ಲಿ ನಿರ್ಲಕ್ಷಿಸುತ್ತಿದ್ದಾರೆ. ಚರಂಡಿ, ರಸ್ತೆ, ಕುಡಿಯುವ ನೀರಿನ ಕೈ ಬೋರ್‌ಗಳು ಹದಗೆಟ್ಟಿದ್ದರೂ ದುರಸ್ತಿಪಡಿಸುತ್ತಿಲ್ಲ ಎಂದು ಆರೋಪಿಸಿದರು.

ಇ-ಸ್ವತ್ತು ನೀಡಲು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಗಣರಾಜ್ಯೋತ್ಸವದಲ್ಲಿ ಭ್ರಷ್ಟರು ಧ್ವಜಾರೋಹಣ ನೆರವೇರಿಸಬಾರದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಜಿಲ್ಲಾ ಕಾರ್ಯಾಧ್ಯಕ್ಷ ಮಹದೇವಪ್ಪ, ಕೋಟೆಕೆರೆ ಗ್ರಾಮ ಘಟಕದ ಅಧ್ಯಕ್ಷ ಮಹದೇವವನಾಯಕ ಪಿ.ಎಸ್.ಐ. ಜಗದೀಶದೂಳಶೆಟ್ಟಿ, ಉಪಾಧ್ಯಕ್ಷ ಸಿದ್ದರಾಜು, ಸೀನಾ, ಮಹದೇವನಾಯಕ ಹಾಗೂ ರೈತಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

12 mins ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

3 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

3 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

3 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

3 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

7 hours ago