ಜಿಲ್ಲೆಗಳು

ಕೋಟೆಕೆರೆ : ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕುವಂತೆ ಗ್ರಾಪಂ ಮುಂಭಾಗ ಪ್ರತಿಭಟನೆ

ಕೋಟೆಕೆರೆ ಗ್ರಾಪಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ

ಬೇಗೂರು(ಗುಂಡ್ಲುಪೇಟೆ ತಾ.): ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮೀಪದ ಕೋಟೆಕೆರೆ ಗ್ರಾಮಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಸಮಾವೇಶಗೊಂಡ ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಮೆರವಣಿಗೆ ನಡೆಸಿ, ನಂತರ ಗ್ರಾಪಂ ಕಚೇರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಾಗ ಸ್ಥಳಕ್ಕೆ ಆಗಮಿಸಿದ ತಾಪಂ ಇ.ಒ ಶ್ರೀಕಂಠರಾಜೇಅರಸ್, ಪಿಡಿಒ ಶಾಂತರಾಜು, ಸೆಸ್ಕ್ ಎ.ಇ.ಇ ರಾಮಚಂದ್ರ ರಾವ್, ಓಂಕಾರ ಅರಣ್ಯವಲಯದ ಆರ್.ಎಫ್.ಓ. ಸತೀಶ್ ಅವರನ್ನು ರೈತರು ತರಾಟೆಗೆ ತೆಗೆದುಕೊಂಡರು.
ಕಾಡಂಚಿನ ಗ್ರಾಮಗಳಿಗೆ ಕಾಡಾನೆ ಜಿಂಕೆ, ಕರಡಿ, ಚಿರತೆ ಸೇರಿದಂತೆ ಮತ್ತಿತರ ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು ಬೆಳೆಗಳನ್ನು ಹಾಳುಮಾಡುತ್ತಿವೆ. ಜೊತೆಗೆ ಸೂಕ್ತ ಪರಿಹಾರವೂ ಸಿಗುತ್ತಿಲ್ಲ. ರಾತ್ರಿವೇಳೆ ವಾಚರ್‌ಗಳು ಗಸ್ತು ತಿರುಗದೆ ಇರುವುದರಿಂದ ಕಾಡಾನೆಗಳು ಜಮೀನಿನತ್ತ ಧಾವಿಸಿ ಬೆಳೆಗಳನ್ನೆಲ್ಲ ತಿಂದುಹಾಕುತ್ತಿವೆ ಎಂದು ಆರೋಪಿಸಿದರು.

ರೈತರ ನೀರಾವರಿ ಜಮೀನಿಗೆ ಟಿ.ಸಿ.ದುರಸ್ತ್ತಿಗೆ 10 ರಿಂದ 15 ದಿನ ಕಾಯಿಸುವುದರಿಂದ ಬೆಳೆ ಒಣಗಿಹೋಗುತ್ತದೆ. ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಓ ಅವರು ಗ್ರಾಮಕ್ಕೆ ಸೌಲಭ್ಯವನ್ನು ಒದಗಿಸುವಲ್ಲಿ ನಿರ್ಲಕ್ಷಿಸುತ್ತಿದ್ದಾರೆ. ಚರಂಡಿ, ರಸ್ತೆ, ಕುಡಿಯುವ ನೀರಿನ ಕೈ ಬೋರ್‌ಗಳು ಹದಗೆಟ್ಟಿದ್ದರೂ ದುರಸ್ತಿಪಡಿಸುತ್ತಿಲ್ಲ ಎಂದು ಆರೋಪಿಸಿದರು.

ಇ-ಸ್ವತ್ತು ನೀಡಲು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಗಣರಾಜ್ಯೋತ್ಸವದಲ್ಲಿ ಭ್ರಷ್ಟರು ಧ್ವಜಾರೋಹಣ ನೆರವೇರಿಸಬಾರದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್, ಜಿಲ್ಲಾ ಕಾರ್ಯಾಧ್ಯಕ್ಷ ಮಹದೇವಪ್ಪ, ಕೋಟೆಕೆರೆ ಗ್ರಾಮ ಘಟಕದ ಅಧ್ಯಕ್ಷ ಮಹದೇವವನಾಯಕ ಪಿ.ಎಸ್.ಐ. ಜಗದೀಶದೂಳಶೆಟ್ಟಿ, ಉಪಾಧ್ಯಕ್ಷ ಸಿದ್ದರಾಜು, ಸೀನಾ, ಮಹದೇವನಾಯಕ ಹಾಗೂ ರೈತಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

3 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago