ಜಿಲ್ಲೆಗಳು

ಪರೀಕ್ಷಾ ಅವಧಿಯನ್ನು 2 ಅಥವಾ 2.30 ಗಂಟೆ ನಿಗದಿ ಕುರಿತು ಶೀಘ್ರ ನಿರ್ಧಾರ

ಪರೀಕ್ಷಾ ಸಮಯ ಕುರಿತಂತೆ ಪ್ರಾಂಶುಪಾಲರ ಕಾರ್ಯಗಾರದಲ್ಲಿ ವಿಭಿನ್ನ ಅಭಿಪ್ರಾಯಗಳ ಮಂಡನೆ

ಮೈಸೂರು: ಎನ್‌ಇಪಿ ಅನುಷ್ಠಾನಗೊಳಿಸಿರುವ ೬೦:೪೦ಅಂಕಗಳ ಅನುಪಾತದಲ್ಲಿ ಪದವಿ ಪರೀಕ್ಷೆಯನ್ನು ನಡೆಸುವಾಗ ೨ ಗಂಟೆ ಅಥವಾ ೨.೩೦ ಗಂಟೆಗೆ ನಿಗದಿಪಡಿಸುವ ಕುರಿತು ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದರಿಂದ ಮುಂದಿನ ಸಿಂಡಿಕೇಟ್,ಶಿಕ್ಷಣ ಮಂಡಳಿ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು.

ಮಾನಸಗಂಗೋತ್ರಿ ವಿಜ್ಞಾನಭವನದ ಸಭಾಂಗಣದಲ್ಲಿ ಸೋಮವಾರ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿ ವತಿಯಿಂದ ಆಯೋಜಿಸಿದ್ದ ಒಂದು ದಿನದ ಪದವಿ ಕಾಲೇಜುಗಳ ಪ್ರಾಂಶುಪಾಲರ ಕಾರ್ಯಗಾರದಲ್ಲಿ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಎಷ್ಟು ಅವಧಿಗೆ ಮೀಸಲಿಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಾಂಶುಪಾಲರುಗಳು ತಂತಮ್ಮ ಸಲಹೆ ನೀಡಿದ್ದರಿಂದ ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಮೇಲೆ ಸಮಯವನ್ನು ನಿಗದಿಪಡಿಸುವ ಮಾತನ್ನು ಪರೀಕ್ಷಾಂಗ ಕುಲಸಚಿವ ಪ್ರೊ.ಜ್ಞಾನಪ್ರಕಾಶ್ ಹೇಳಿದರು.

ಮೊದಲನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ವಾರದೊಳಗೆ ಪ್ರಕಟಿಸಲಾಗುವುದು. ಎನ್‌ಇಪಿ ಪ್ರಕಾರ ಎರಡುಗಂಟೆಗಳ ಕಾಲ ಪರೀಕ್ಷೆ ನಡೆಸಬೇಕು. ಆದರೆ, ಶಿಕ್ಷಣ ಮಂಡಳಿ ಸಭೆಯಲ್ಲಿ ೨ಗಂಟೆ ಸಾಕಾಗದ ಕಾರಣ ಎರಡೂವರೆ ಸಮಯ ಕೊಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಇದಲ್ಲದೆ, ವಿದ್ಯಾರ್ಥಿಗಳು ನೇರವಾಗಿ ಭೇಟಿ ಮಾಡಿ ಸಮಯ ಹೆಚ್ಚಿಸುವಂತೆ ಕೋರಿದ್ದಾರೆ.

ಬೇರೆ ಬೇರೆ ವಿವಿಗಳಲ್ಲಿ ಎರಡೂವರೆ ಗಂಟೆ ಸಮಯ ಕೊಟ್ಟಿರುವಾಗ ಮೈಸೂರು ವಿವಿಯಲ್ಲಿ ೨ ಗಂಟೆಗೆ ಸೀಮಿತಗೊಳಿಸಿರುವುದನ್ನು ಪ್ರಸ್ತಾಪಿಸಿರುವ ಕಾರಣ ಈ ಬಗ್ಗೆ ಪ್ರಾಂಶುಪಾಲರ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ನುಡಿದರು. ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿುಂಂತೆ ಒಂದು ಸೆಮಿಸ್ಟರ್ ಮುಗಿದಿದೆ. ಎರಡನೇ ಸೆಮಿಸ್ಟರ್ ಮೌಲ್ಯವಾಪನ ಮುಗಿದು ಡಿಕೋಡಿಂಗ್ ಆಗಿದೆ. ವಾರದೊಳಗೆ ಪ್ರಕಟ ಮಾಡುತ್ತೇವೆ. ಕೋರ್ಸ್ ನೋಂದಣಿ ವಾಡಿಕೊಳ್ಳುವಾಗ ಮೂರನೇ ಸೆಮಿಸ್ಟರ್ ಬಂದಾಗ ಶೇ.೭೫ ರಷ್ಟು ಹಾಜರಾತಿ ನಮೂದನೆ ಮಾಡಬೇಕು. ಎಸ್‌ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ಇರುವುದರಿಂದ ಸರಿಯಾಗಿ ನಮೂದಿಸಬೇಕು. ಪರೀಕ್ಷಾ ಶುಲ್ಕ ಪಾವತಿಸದಿದ್ದರೂ ಹಾಜರಾತಿ ಆಗಿರುವುದು ಕಂಡುಬಂದಿದೆ. ಒಂದು ವೇಳೆ ಹಾಜರಾದರೂ ನೋಂದಣಿ ಆಗುವುದಿಲ್ಲ. ನಮ್ಮಲ್ಲಿರುವ ಹಾಜರಾತಿ ಮತ್ತು ಪರೀಕ್ಷೆ ನೋಂದಣಿ ಕಾರ್ಯವನ್ನು ಯುಎಸ್‌ಎಂಸಿ ಮತ್ತು ಎನ್‌ಇಪಿಯನ್ನು ಬೇರೆ ಬೇರೆ ಏಜೆನ್ಸಿ ನೋಡಿಕೊಳ್ಳುತ್ತದೆ. ಒಂದು ಕಾಲೇಜು ಕಳುಹಿಸದಿದ್ದರೆ ಫಲಿತಾಂಶ ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಾನಸಗಂಗೋತ್ರಿ ವಿಜ್ಞಾನಭವನದ ಸಭಾಂಗಣದಲ್ಲಿ ಸೋಮವಾರ ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಶಿಕ್ಷಣ ಮಂಡಳಿ ವತಿಯಿಂದ ಆಯೋಜಿಸಿದ್ದ ಒಂದು ದಿನದ ಪದವಿ ಕಾಲೇಜುಗಳ ಪ್ರಾಂಶುಪಾಲರ ಕಾರ್ಯಗಾರವನ್ನು ಹಂಗಾಮಿ ಕುಲಪತಿ ಪ್ರೊ.ಎಚ್.ರಾಜಶೇಖರ್ ಉದ್ಘಾಟಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಜ್ಞಾನಪ್ರಕಾಶ್, ಕಾಲೇಜು ಶಿಕ್ಷಣ ಮಂಡಳಿ ನಿರ್ದೇಶಕ ಪ್ರೊ.ಬಿ.ಶ್ರೀಕಂಠಸ್ವಾಮಿ ಹಾಜರಿದ್ದರು

ವಾಣಿಜ್ಯಶಾಸ್ತ್ರ ಅಕೌಂಟೆಂಟ್ ಬರೆಯುವ ಮಕ್ಕಳಿಗೆ ೨ಗಂಟೆ ಸಾಕಾಗದ ಕಾರಣ ೨.೩೦ ಗಂಟೆಗೆ ಅವಕಾಶ ಮಾಡಿಕೊಡಬೇಕು. ಸಮಯ ಮುಗಿಯುತ್ತೆಂದು ಉತ್ತರಪತ್ರಿಕೆಯನ್ನು ಪಡೆದುಕೊಳ್ಳುವುದರಿಂದ ಉತ್ತಮವಾಗಿ ಬರೆಯುವವರಿಗೆ ತೊಂದರೆಯಾಗಲಿದೆ. ಬಿಕಾಂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಲಿದೆ. -ದೇವರಾಜ್,ಪ್ರಾಂಶುಪಾಲರು. ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು.

 ಪರೀಕ್ಷೆಗೆ ನೀಡಿರುವ ಸಮಯ ಎರಡು ಗಂಟೆಗಳು ಸಾಕು. ಪ್ರಾಕ್ಟಿಕಲ್ ೪೦ ಅಂಕಗಳಿಗೆ,ಥಿಯರಿ ೬೦ ಅಂಕಗಳಿಗೆ ಇರುವ ಕಾರಣ ೨.೩೦ ಗಂಟೆಗಳ ಸಮಯದ ಅವಶ್ಯಕತೆ ಇಲ್ಲ.ವಿದ್ಯಾರ್ಥಿಗಳುಸಮಯ ನಿಗದಿಪಡಿಸುವಂತೆ ಈ ರೀತಿ ಇಡುವ ಬೇಡಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದು. ಎನ್‌ಇಪಿಯಲ್ಲಿ ಎರಡು ಗಂಟೆಗೆಸೀಮಿತಗೊಳಿಸಿರುವುದನ್ನು ಮುಂದುವರಿಸಬೇಕು. -ಜಯಕುಮಾರಿ, ಮಹಾಜನ ಕಾಲೇಜು ಪ್ರಾಂಶುಪಾಲರು.

 

 

 

 

 

 

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago