ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ನಾಡಗೀತೆ ಮೂಲಕ ಗೌರವ ಸಲ್ಲಿಸಲಾಯಿತು.
ಕನ್ನಡ ಭಾವುಟ ಹಿಡಿದು ಗಮನ ಸೆಳೆದ ಪುಟಾಣಿಗಳು : ಕಾರ್ಯಕ್ರಮದ ಅಂಗವಾಗಿ ಆರ್.ಎಸ್.ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಕನ್ನಡ ‘ಹಳದಿ ಕೆಂಪು ‘ ವರ್ಣನೆಗಳನ್ನೋಳಗೊಂಡ ಕನ್ನಡ ಭಾವುಟವನ್ನು ಹಿಡಿದು ಶಿಸ್ತಿನ ಸಿಪಾಯಿಗಳಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಲ್ಲಿನ ಶಿಕ್ಷಕರು ಕನ್ನಡ ಧ್ವಜ ಬಣ್ಣಗಳನ್ನು ಒಳಗೊಂಡ ಉಡುಗೆಯಲ್ಲಿ ಕಾಣಿಕೊಂಡಿದ್ದು ವಿಶೇಷವಾಗಿತ್ತು.
ಗ್ರಾಮಸ್ಥರ ಕನ್ನಡ ಪ್ರೇಮ: ಕನ್ನಡ ನಾಡು ನುಡಿ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿರುವ ಆರ್. ಎಸ್.ದೊಡ್ಡಿ ಗ್ರಾಮಸ್ಥರು ಗ್ರಾಮದ ಧಾರ್ಮಿಕ ಪುಣ್ಯಸ್ಥಳದಲ್ಲಿ ಕನ್ನಡಾಂಬೆಯ ವೇದಿಕೆಯನ್ನು ನಿರ್ಮಾಣ ಮಾಡಿ, ಪ್ರತಿ ವರ್ಷವೂ ಕನ್ನಡಕ್ಕೆ ಗೌರವ ಸಲ್ಲಿಸುವ ಕೆಲಸವನ್ನು ಮಾಡುತ್ತ ಬಂದಿರುವುದು ಅನುಕರಣಿಯವಾಗಿದೆ.
ಕಾರ್ಯಕ್ರಮದಲ್ಲಿ ಆರ್. ಎಸ್. ದೊಡ್ಡಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…