ಜಿಲ್ಲೆಗಳು

ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ನಾಡಗೀತೆ ಮೂಲಕ ಗೌರವ ಸಲ್ಲಿಸಲಾಯಿತು.

ಕನ್ನಡ ಭಾವುಟ ಹಿಡಿದು ಗಮನ ಸೆಳೆದ ಪುಟಾಣಿಗಳು : ಕಾರ್ಯಕ್ರಮದ ಅಂಗವಾಗಿ ಆರ್.ಎಸ್.ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಕನ್ನಡ ‘ಹಳದಿ ಕೆಂಪು ‘ ವರ್ಣನೆಗಳನ್ನೋಳಗೊಂಡ ಕನ್ನಡ ಭಾವುಟವನ್ನು ಹಿಡಿದು ಶಿಸ್ತಿನ ಸಿಪಾಯಿಗಳಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಲ್ಲಿನ ಶಿಕ್ಷಕರು ಕನ್ನಡ ಧ್ವಜ ಬಣ್ಣಗಳನ್ನು ಒಳಗೊಂಡ ಉಡುಗೆಯಲ್ಲಿ ಕಾಣಿಕೊಂಡಿದ್ದು ವಿಶೇಷವಾಗಿತ್ತು.

ಗ್ರಾಮಸ್ಥರ ಕನ್ನಡ ಪ್ರೇಮ: ಕನ್ನಡ ನಾಡು ನುಡಿ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿರುವ ಆರ್. ಎಸ್.ದೊಡ್ಡಿ ಗ್ರಾಮಸ್ಥರು ಗ್ರಾಮದ ಧಾರ್ಮಿಕ ಪುಣ್ಯಸ್ಥಳದಲ್ಲಿ ಕನ್ನಡಾಂಬೆಯ ವೇದಿಕೆಯನ್ನು ನಿರ್ಮಾಣ ಮಾಡಿ, ಪ್ರತಿ ವರ್ಷವೂ ಕನ್ನಡಕ್ಕೆ ಗೌರವ ಸಲ್ಲಿಸುವ ಕೆಲಸವನ್ನು ಮಾಡುತ್ತ ಬಂದಿರುವುದು ಅನುಕರಣಿಯವಾಗಿದೆ.

ಕಾರ್ಯಕ್ರಮದಲ್ಲಿ ಆರ್. ಎಸ್. ದೊಡ್ಡಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

andolana

Recent Posts

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

4 mins ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

26 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

38 mins ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

15 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

15 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

16 hours ago