ಹನೂರು: ಪಟ್ಟಣ ಪಂಚಾಯತಿ ವ್ಯಾಪ್ತಿಯ ಆರ್.ಎಸ್. ದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆರ್.ಎಸ್.ದೊಡ್ಡಿ ಗ್ರಾಮದ ಬೆಟ್ಟಳ್ಳಿ ಮಾರಮ್ಮ ತೆಪ್ಪೋತ್ಸವ ಜರುಗಲಿರುವ ಜೋಡಿ ಕೆರೆ ಹಾಗೂ ಮಹದೇಶ್ವರ ದೇವಾಲಯ ಮುಂಭಾಗ ನಿರ್ಮಿಸಲಾಗಿರುವ ಕನ್ನಡ ಭಾವುಟ ಧ್ವಜಾರೋಹಣ ವೇದಿಕೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ನಾಡಗೀತೆ ಮೂಲಕ ಗೌರವ ಸಲ್ಲಿಸಲಾಯಿತು.
ಕನ್ನಡ ಭಾವುಟ ಹಿಡಿದು ಗಮನ ಸೆಳೆದ ಪುಟಾಣಿಗಳು : ಕಾರ್ಯಕ್ರಮದ ಅಂಗವಾಗಿ ಆರ್.ಎಸ್.ದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಕನ್ನಡ ‘ಹಳದಿ ಕೆಂಪು ‘ ವರ್ಣನೆಗಳನ್ನೋಳಗೊಂಡ ಕನ್ನಡ ಭಾವುಟವನ್ನು ಹಿಡಿದು ಶಿಸ್ತಿನ ಸಿಪಾಯಿಗಳಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಲ್ಲಿನ ಶಿಕ್ಷಕರು ಕನ್ನಡ ಧ್ವಜ ಬಣ್ಣಗಳನ್ನು ಒಳಗೊಂಡ ಉಡುಗೆಯಲ್ಲಿ ಕಾಣಿಕೊಂಡಿದ್ದು ವಿಶೇಷವಾಗಿತ್ತು.
ಗ್ರಾಮಸ್ಥರ ಕನ್ನಡ ಪ್ರೇಮ: ಕನ್ನಡ ನಾಡು ನುಡಿ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿರುವ ಆರ್. ಎಸ್.ದೊಡ್ಡಿ ಗ್ರಾಮಸ್ಥರು ಗ್ರಾಮದ ಧಾರ್ಮಿಕ ಪುಣ್ಯಸ್ಥಳದಲ್ಲಿ ಕನ್ನಡಾಂಬೆಯ ವೇದಿಕೆಯನ್ನು ನಿರ್ಮಾಣ ಮಾಡಿ, ಪ್ರತಿ ವರ್ಷವೂ ಕನ್ನಡಕ್ಕೆ ಗೌರವ ಸಲ್ಲಿಸುವ ಕೆಲಸವನ್ನು ಮಾಡುತ್ತ ಬಂದಿರುವುದು ಅನುಕರಣಿಯವಾಗಿದೆ.
ಕಾರ್ಯಕ್ರಮದಲ್ಲಿ ಆರ್. ಎಸ್. ದೊಡ್ಡಿ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಯುವಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…