ಜಿಲ್ಲೆಗಳು

ಆರ್. ಎಸ್. ದೊಡ್ಡಿಯಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ನೂತನ ಪಲ್ಲಕ್ಕಿ ಉತ್ಸವ

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮನವರ ಕಂಚು ಮತ್ತು ಸ್ಟಿಲ್ ಲೋಹಗಳನ್ನೋಳಗೊಂಡ ನೂತನ ಪಲ್ಲಕ್ಕಿ ಉತ್ಸವ ಲೋಕಾರ್ಪಣೆ ಹಾಗೂ ಪೂಜಾ ಕಾರ್ಯಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದವು.

ಶ್ರೀ ಮಹದೇಶ್ವರ ದೇವಸ್ಥಾನ ಹಾಗೂ ಜೋಡಿ ಕೆರೆ ಅಶ್ವಥ ಮರದ ಬಳಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ನೂತನ ಪಲ್ಲಕ್ಕಿ ಉತ್ಸವಕ್ಕೆ ಗ್ರಾಮದ ಅಧಿ ದೇವತೆಯ ಫೋಟೋವನ್ನು ಪ್ರತಿಷ್ಠಾಪಿಸಿ ತ್ರಿಶೂಲ, ಕಳಸ, ಛತ್ರಿ ಚಾಮರರೂಢ ಪಲ್ಲಕ್ಕಿ ಉತ್ಸವಕ್ಕೆ ಶ್ರೀ ಬೆಟ್ಟಳ್ಳಿ ಮಾರಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಪಲ್ಲಕ್ಕಿ ಉತ್ಸವ ಅಲಂಕಾರ ಮತ್ತು ಮೆರವಣಿಗೆ: ಶ್ರೀ ಬೆಟ್ಟಳ್ಳಿ ಮಾರಮ್ಮ ಪಲ್ಲಕ್ಕಿ ಉತ್ಸವವನ್ನು ವೀಳ್ಯದೆಲೆ, ನಿಂಬೆ ಹಣ್ಣು ಹಾಗೂ ವಿವಿಧ ಬಗೆಯ ಪುಷ್ಪಗಳಿಂದ ಸಿಂಗರಿಸಲಾಗಿತ್ತು.

ವಾದ್ಯ ಮೇಳಗಳೊಂದಿಗೆ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಹಿನ್ನಲೆ : ಪ್ರತಿ ವರ್ಷಕೊಮ್ಮೆ ಹನೂರು ಪಟ್ಟಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಜರುಗಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರ ಮಹೋತ್ಸವ ಅಂಗವಾಗಿ ಸಂಪ್ರದಾಯದಂತೆ ಆರ್. ಎಸ್. ದೊಡ್ಡಿ ಗ್ರಾಮದ ದೊಡ್ಡ ಕೆರೆಯಲ್ಲಿ ದೇವಿಯ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗುತ್ತದೆ. ಈ ವೇಳೆ ಆರ್.ಎಸ್.ದೊಡ್ಡಿ ಗ್ರಾಮಸ್ಥರು ದೇವಿಗೆ ಪಲ್ಲಕಿ ಉತ್ಸವವನ್ನು ಬಿದಿರಿನಿಂದ ತಯಾರು ಮಾಡಿ ಪಲ್ಲಕಿ ಉತ್ಸವವನ್ನು ನಡೆಸುತ್ತಾ ಬಂದಿದ್ದರು. ಈ ಬಾರಿ ಗ್ರಾಮಸ್ಥರು ಶಾಶ್ವತವಾದ ಪಲ್ಲಕ್ಕಿ ಉತ್ಸವವನ್ನು ನಿರ್ಮಾಣ ಮಾಡುವ ದಿಸೆಯಲ್ಲಿ ಗ್ರಾಮದ ಎಲ್ಲ ಸಮುದಾಯದ ಜನತೆ ಸೇರಿ ಉತ್ಕೃಷ್ಟವಾದ ಕಂಚು ಹಾಗೂ ಸ್ಟಿಲ್ ಲೋಹದಿಂದ ತಯಾರಾದ ಪಲ್ಲಕ್ಕಿಯನ್ನು ಧಾರ್ಮಿಕ ಪೂಜಾ ಕಾರ್ಯಕ್ಕೆ ಅರ್ಪಿಸುವ ಮೂಲಕ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವರ ಕೃಪೆಗೆ ಪಾತ್ರರಾಗಿದ್ದೇವೆ ಎಂದು ಗ್ರಾಮದ ಮುಖಂಡರು ತಿಳಿಸಿದರು.

andolana

Recent Posts

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

50 mins ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

2 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

2 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

2 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

3 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

3 hours ago