ಜಿಲ್ಲೆಗಳು

ಚೆಲುವರಾಯಸ್ವಾಮಿ ದರ್ಶನ ಪಡೆದ ನಟಿ ರಚಿತಾ ರಾಮ್

ಮೇಲುಕೋಟೆ: ನಟಿ ರಚಿತಾ ರಾಮ್ ಶುಕ್ರವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದರು. ಬೆಳಿಗ್ಗೆ 9 ಗಂಟೆಯ ವೇಳೆಗೆ ಮೇಲುಕೋಟೆಗೆ ಬಂದ ರಚಿತಾ ಯದುಗಿರಿನಾಯಕಿ ಮಹಾಲಕ್ಷ್ಮಿ , ರಾವಾನುಜಾಚಾರ್ಯರ ದರ್ಶನ ಪಡೆದರು.

ದೇವಾಲಯದ ಅಮ್ಮನವರ ಸನ್ನಿಧಿಯ ಪ್ರಾಂಗಣದ ಶಿಲ್ಪಕಲಾ ಸೌಂದರ್ಯವನ್ನು ವೀಕ್ಷಿಸಿದ ರಚಿತಾರಾಮ್ ಮುಂಬರುವ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುವ ಹತ್ತು ದಿನಗಳ ವೈರಮುಡಿ ಜಾತ್ರಾ ಮಹೋತ್ಸವದಲ್ಲಿ ಒಂದು ದಿನ ಭಾಗವಹಿಸಿ ದೇವರ ದರ್ಶನ ಪಡೆದು ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದರು.

ಈ ವೇಳೆ ದೇವಾಲಯದ ಪರಂಪರೆ, ಸಂಸ್ಕೃತಿ ಹಾಗೂ ವೈರಮುಡಿ ಉತ್ಸವದ ವಿಶೇಷಗಳ ಬಗ್ಗೆ ರಚಿತಾ ಅವರಿಗೆ ಮಾಹಿತಿ ನೀಡಿದ ಸ್ಥಾನೀಕಂ ಸಂತಾನರಾಮನ್, ವೈರಮುಡಿ ಬ್ರಹ್ಮೋತ್ಸವ ಮತ್ತಷ್ಟು ವೈಭವವಾಗಿ ನಡೆಯಲು ಸಹಕಾರ ನೀಡಿ. ಇದು ನಿಮ್ಮ ಯಶಸ್ಸಿಗೆ ಸಾರ್ಥಕ ಸೇವೆಯಾಗಿ ಉಳಿಯುತ್ತದೆ ಎಂದರು.

ಅರ್ಚಕರಾದ ನಾರಾಯಣಪ್ರಸಾದ್ ಭಟ್ಟರ್, ಸ್ಥಾನೀಕರಾದ ಕೋವಿಲ್ ನಂಬಿ ಪ್ರಸನ್ನ ಇತರರಿದ್ದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

29 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago