ಜಿಲ್ಲೆಗಳು

ಚೆಲುವರಾಯಸ್ವಾಮಿ ದರ್ಶನ ಪಡೆದ ನಟಿ ರಚಿತಾ ರಾಮ್

ಮೇಲುಕೋಟೆ: ನಟಿ ರಚಿತಾ ರಾಮ್ ಶುಕ್ರವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದರು. ಬೆಳಿಗ್ಗೆ 9 ಗಂಟೆಯ ವೇಳೆಗೆ ಮೇಲುಕೋಟೆಗೆ ಬಂದ ರಚಿತಾ ಯದುಗಿರಿನಾಯಕಿ ಮಹಾಲಕ್ಷ್ಮಿ , ರಾವಾನುಜಾಚಾರ್ಯರ ದರ್ಶನ ಪಡೆದರು.

ದೇವಾಲಯದ ಅಮ್ಮನವರ ಸನ್ನಿಧಿಯ ಪ್ರಾಂಗಣದ ಶಿಲ್ಪಕಲಾ ಸೌಂದರ್ಯವನ್ನು ವೀಕ್ಷಿಸಿದ ರಚಿತಾರಾಮ್ ಮುಂಬರುವ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುವ ಹತ್ತು ದಿನಗಳ ವೈರಮುಡಿ ಜಾತ್ರಾ ಮಹೋತ್ಸವದಲ್ಲಿ ಒಂದು ದಿನ ಭಾಗವಹಿಸಿ ದೇವರ ದರ್ಶನ ಪಡೆದು ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದರು.

ಈ ವೇಳೆ ದೇವಾಲಯದ ಪರಂಪರೆ, ಸಂಸ್ಕೃತಿ ಹಾಗೂ ವೈರಮುಡಿ ಉತ್ಸವದ ವಿಶೇಷಗಳ ಬಗ್ಗೆ ರಚಿತಾ ಅವರಿಗೆ ಮಾಹಿತಿ ನೀಡಿದ ಸ್ಥಾನೀಕಂ ಸಂತಾನರಾಮನ್, ವೈರಮುಡಿ ಬ್ರಹ್ಮೋತ್ಸವ ಮತ್ತಷ್ಟು ವೈಭವವಾಗಿ ನಡೆಯಲು ಸಹಕಾರ ನೀಡಿ. ಇದು ನಿಮ್ಮ ಯಶಸ್ಸಿಗೆ ಸಾರ್ಥಕ ಸೇವೆಯಾಗಿ ಉಳಿಯುತ್ತದೆ ಎಂದರು.

ಅರ್ಚಕರಾದ ನಾರಾಯಣಪ್ರಸಾದ್ ಭಟ್ಟರ್, ಸ್ಥಾನೀಕರಾದ ಕೋವಿಲ್ ನಂಬಿ ಪ್ರಸನ್ನ ಇತರರಿದ್ದರು.

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago