ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…