ಜಿಲ್ಲೆಗಳು

ರಾಹುಲ್‌ ಗಾಂಧಿ ಜನಪ್ರಿಯತೆ ಸಹಿಸದ ಬಿಜೆಪಿ ದುರುದ್ದೇಶ ತಂತ್ರವನ್ನು ರೂಪಿಸುತ್ತಿದೆ : ಶಾಸಕ ಆರ್‌ ನರೇಂದ್ರ ಕಿಡಿ

ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ, ನಿರುದ್ಯೋಗದ ಸಮಸ್ಯೆಯನ್ನು ಹೊಗಲಾಡಿಸುವ ಸಲುವಾಗಿ ಬೆಲೆ ಏರಿಕೆಯ ಬಗ್ಗೆ ಜನರಲ್ಲಿ ಅರಿವು ಮೂಢಿಸುವ ಸಲುವಾಗಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕೇರಳಕ್ಕೆ ಆಗಮಿಸುವ ರಾಹುಲ್‍ಗಾಂಧಿ ಅವರಿಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸಾವಿರ ಕಾರ್ಯಕರ್ತರು ಭಾಗವಹಿಸುವುದರ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆಗಾಗಿ ಕಾಂಗ್ರೆಸ್‍ಗೆ ಕೆಟ್ಟ ಹೆಸರನ್ನು ತರುವ ಉದ್ಧೇಶದಿಂದ ಇನ್ನಿಲ್ಲದ ಸಂಚುಗಳನ್ನು ರೂಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‍ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago