ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…