ಜಿಲ್ಲೆಗಳು

ರಾಹುಲ್‌ ಗಾಂಧಿ ಜನಪ್ರಿಯತೆ ಸಹಿಸದ ಬಿಜೆಪಿ ದುರುದ್ದೇಶ ತಂತ್ರವನ್ನು ರೂಪಿಸುತ್ತಿದೆ : ಶಾಸಕ ಆರ್‌ ನರೇಂದ್ರ ಕಿಡಿ

ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ, ನಿರುದ್ಯೋಗದ ಸಮಸ್ಯೆಯನ್ನು ಹೊಗಲಾಡಿಸುವ ಸಲುವಾಗಿ ಬೆಲೆ ಏರಿಕೆಯ ಬಗ್ಗೆ ಜನರಲ್ಲಿ ಅರಿವು ಮೂಢಿಸುವ ಸಲುವಾಗಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕೇರಳಕ್ಕೆ ಆಗಮಿಸುವ ರಾಹುಲ್‍ಗಾಂಧಿ ಅವರಿಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 20 ಸಾವಿರ ಕಾರ್ಯಕರ್ತರು ಭಾಗವಹಿಸುವುದರ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆಗಾಗಿ ಕಾಂಗ್ರೆಸ್‍ಗೆ ಕೆಟ್ಟ ಹೆಸರನ್ನು ತರುವ ಉದ್ಧೇಶದಿಂದ ಇನ್ನಿಲ್ಲದ ಸಂಚುಗಳನ್ನು ರೂಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಗುಂಡ್ಲುಪೇಟೆಗೆ ಆಗಮಿಸಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಸೇರಿದಂತೆ ಇನ್ನಿತರೆ ರಾಜ್ಯ ಮಟ್ಟದ ಹಿರಿಯ ನಾಯಕರು, ಸಂಸದರು, ಶಾಸಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 9ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಪಾದಯಾತ್ರೆ ನಡೆಯಲಿದೆ. ಬಳಿಕ ಗಿರಿಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ತೆರಳಲು 115 ಬಸ್ ಹಾಗೂ ಇನ್ನಿತರೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್‍ಗಳನ್ನು ಕಿಡೀಗೇಡಿಗಳು ಬ್ಲೇಡ್ ಹಾಕಿ ಹರಿದು ಹಾಕಿದ್ದಾರೆ. ಆಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಪ್ಪಿತಸ್ಥರನ್ನು ಬಂಧಿಸುವಂತೆ ಕೂಡಲೇ ಅಗತ್ಯ ಕ್ರಮವಹಿಸಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮ ವಹಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಹರೀಶ್‍ಕುಮಾರ್, ಸುದೇಶ್, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ರಂಗಸ್ವಾಮಿ, ಬೂದುಬಾಳು ರಾಜೇಶ್, ಶಂಭುಲಿಂಗ, ರಂಗಧಾಮಚಾರ್ ಹಾಗೂ ಇನ್ನಿತರರಿದ್ದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

12 hours ago