ಆಂದೋಲನ ವಿಶೇಷ
ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ ಮಾಡುವ ರಾಹುಲ್ ಗಾಂಧಿ ತಮ್ಮ 52ನೇ ವಯಸ್ಸಿನಲ್ಲೂ ಯುವಕನಂತೆ ಕಾಣಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ದೀರ್ಘವಾದ ಪಾದಯಾತ್ರೆ ಕೈಗೊಂಡರೂ ಅವರ ಮುಖದಲ್ಲಿ ಎಂದೂ ಸುಸ್ತು ಕಂಡಿಲ್ಲ.
ಆದರೆ ಕಾಂಗ್ರೆಸ್ ನಾಯಕನ ಈ ಫಿಟ್ನೆಸ್ ಮಂತ್ರ ರಾಜ್ಯ ನಾಯಕರಿಗೆ ಪೀಕಲಾಟ ತಂದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ವೇಗದ ಹೆಜ್ಜೆ ಹಾಕುವ ರಾಹುಲ್ ಜತೆಗೆ ನಡೆಯುವುದೇ ರಾಜ್ಯ ನಾಯಕರಿಗೆ ಸವಾಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ಗೆ ಜತೆಜತೆಯಾಗಿ ಹೆಜ್ಜೆ ಹಾಕುತ್ತಾ ಬಂದಿದ್ದಾರೆ.
ಆದರೆ ಪಕ್ಷದ ಪಾಲಿಗೆ ಇನ್ನೂ ಯುವ ನಾಯಕನಾಗಿರುವ ರಾಹುಲ್ ಜತೆ ಹೆಜ್ಜೆ ಹಾಕುವುದು ಇಬ್ಬರೂ ನಾಯಕರಿಗೂ ತುಸು ಕಷ್ಟವೆನಿಸಿದೆ. ಇ.ಡಿ ವಿಚಾರಣೆಯ ಸಂದರ್ಭದಲ್ಲಿ ಗೈರುಹಾಜರಾಗಿದ್ದು ಬಿಟ್ಟರೆ ಡಿಕೆಶಿ ಅವರು ರಾಹುಲ್ ಜತೆಗೆ ಸಾಗುತ್ತಾ ಬಂದಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಜತೆಗಿನ ಮೀಸಲಾತಿ ಸಭೆ ಸೇರಿದಂತೆ ಒಂದಷ್ಟು ನೆಪ ಇಟ್ಟುಕೊಂಡು ಮಧ್ಯೆ, ಬಿಡುವು ಮಾಡಿಕೊಂಡಿದ್ದಾರೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಜೋಡೋ ಯಾತ್ರೆ ಸಾಗುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಇದೇ ಅನುಭವವಾಯಿತು. ಕಾಂಗ್ರೆಸ್ ಧ್ವಜ ಹಿಡಿದು ಮುಂದೆ ಸಾಗುತ್ತಿದ್ದ ಡಿಕೆಶಿ ಅವರ ಕೈ ಹಿಡಿದ ರಾಹುಲ್ ಓಟ ಆರಂಭಿಸಿದರು. ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಡಿಕೆಶಿ ಓಡಿದರಾದರೂ ಅವರ ಮುಖದಲ್ಲಿ ಸುಸ್ತು ಎದ್ದು ಕಾಣುತ್ತಿತ್ತು. ಮರು ದಿನ ಯಾತ್ರೆಯ ಮಧ್ಯೆ ಸಿಕ್ಕ ಸಣ್ಣ ಹುಡುಗನೊಬ್ಬನ ಜತೆ ಸ್ಪರ್ಧೆಗೆ ಇಳಿದ ರಾಹುಲ್ ಆತನ ಜತೆ ʼದಂಡʼ ತೆಗೆದು ಖುಷಿಪಟ್ಟರು. ಆದರೆ ಆಟದಲ್ಲಿ ಭಾಗಿಯಾದ ಡಿಕೆಶಿ ಪಾಲಿಗೆ ಇದು ನಿಜಕ್ಕೂʼದಂಡʼನೆಯಂತಿತ್ತು.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…