ಜಿಲ್ಲೆಗಳು

ಕಾಂಗ್ರೆಸ್ ನಾಯಕರಿಗೆ ಸವಾಲಾದ ರಾಹುಲ್ ಫಿಟ್ನೆಸ್ ಟೆಸ್ಟ್

ಆಂದೋಲನ ವಿಶೇಷ

ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ ಮಾಡುವ ರಾಹುಲ್ ಗಾಂಧಿ ತಮ್ಮ 52ನೇ ವಯಸ್ಸಿನಲ್ಲೂ ಯುವಕನಂತೆ ಕಾಣಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ದೀರ್ಘವಾದ ಪಾದಯಾತ್ರೆ ಕೈಗೊಂಡರೂ ಅವರ ಮುಖದಲ್ಲಿ ಎಂದೂ ಸುಸ್ತು ಕಂಡಿಲ್ಲ.


ಆದರೆ ಕಾಂಗ್ರೆಸ್ ನಾಯಕನ ಈ ಫಿಟ್ನೆಸ್ ಮಂತ್ರ ರಾಜ್ಯ ನಾಯಕರಿಗೆ ಪೀಕಲಾಟ ತಂದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ವೇಗದ ಹೆಜ್ಜೆ ಹಾಕುವ ರಾಹುಲ್ ಜತೆಗೆ ನಡೆಯುವುದೇ ರಾಜ್ಯ ನಾಯಕರಿಗೆ ಸವಾಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ಗೆ ಜತೆಜತೆಯಾಗಿ ಹೆಜ್ಜೆ ಹಾಕುತ್ತಾ ಬಂದಿದ್ದಾರೆ.

ಆದರೆ ಪಕ್ಷದ ಪಾಲಿಗೆ ಇನ್ನೂ ಯುವ ನಾಯಕನಾಗಿರುವ ರಾಹುಲ್ ಜತೆ ಹೆಜ್ಜೆ ಹಾಕುವುದು ಇಬ್ಬರೂ ನಾಯಕರಿಗೂ ತುಸು ಕಷ್ಟವೆನಿಸಿದೆ. ಇ.ಡಿ ವಿಚಾರಣೆಯ ಸಂದರ್ಭದಲ್ಲಿ ಗೈರುಹಾಜರಾಗಿದ್ದು ಬಿಟ್ಟರೆ ಡಿಕೆಶಿ ಅವರು ರಾಹುಲ್ ಜತೆಗೆ ಸಾಗುತ್ತಾ ಬಂದಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಜತೆಗಿನ ಮೀಸಲಾತಿ ಸಭೆ ಸೇರಿದಂತೆ ಒಂದಷ್ಟು ನೆಪ ಇಟ್ಟುಕೊಂಡು ಮಧ್ಯೆ, ಬಿಡುವು ಮಾಡಿಕೊಂಡಿದ್ದಾರೆ.

ಪಾದಯಾತ್ರೆಯ ನಡುವೆ ರಾಹುಲ್ ತೋರುವ ಅತ್ಯುತ್ಸಾಹ ಈ ಇಬ್ಬರು ನಾಯಕರನ್ನು ಸಮಸ್ಯೆಗೆ ಸಿಲುಕಿಸುತ್ತಿದೆ. ವಿಜಯದಶಮಿ ಹಿನ್ನೆಲೆಯಲ್ಲಿ ಎರಡು ದಿನಗಳ ವಿರಾಮದ ಬಳಿಕ ನಾಗಮಂಗಲದಿಂದ ಆರಂಭವಾದ ಯಾತ್ರೆಯಲ್ಲಿ ರಾಹುಲ್ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಅವರ ಕೈ ಹಿಡಿದು ಓಡಲಾರಂಭಿಸಿದರು. 75ರ ಹರೆಯ ದಾಟಿದ ಸಿದ್ದರಾಮಯ್ಯ ಅವರೂ ಉತ್ಸಾಹದಿಂದ ರಾಹುಲ್ ಜತೆ ಹೆಜ್ಜೆ ಹಾಕಿದರು.

ಕೆಲವೇ ಮೀಟರ್ ದೂರಕ್ಕೆ ಈ ಓಟ ಸೀಮಿತವಾದ ಕಾರಣ ಸಿದ್ದು ಅವರಿಗೆ ಇದು ಕಷ್ಟವೆನಿಸಲಿಲ್ಲ. ಆದರೆ ಅವರ ವಯಸ್ಸಿನ ಹಿರಿತನಕ್ಕೆ ಇದು ನಿಜಕ್ಕೂ ಸವಾಲಾಗಿತ್ತು. ಈ ಹಿಂದೆ ಹಲವು ಪಾದಯಾತ್ರೆಗಳಲ್ಲಿ ಭಾಗವಹಿಸಿದ ಅನುಭವ ಇರುವ ಸಿದ್ದು ಅವರಲ್ಲಿ ಈಗಲೂ ಅದೇ ಉತ್ಸಾಹವಿದೆ. ಆದರೆ ದೇಹ ಮನಸ್ಸಿನ ಓಟಕ್ಕೆ ಸಹಕರಿಸುವ ಖಾತರಿ ಇಲ್ಲ.


ಕೋಟೆ ನಾಡು ಚಿತ್ರದುರ್ಗದಲ್ಲಿ ಜೋಡೋ ಯಾತ್ರೆ ಸಾಗುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಇದೇ ಅನುಭವವಾಯಿತು. ಕಾಂಗ್ರೆಸ್ ಧ್ವಜ ಹಿಡಿದು ಮುಂದೆ ಸಾಗುತ್ತಿದ್ದ ಡಿಕೆಶಿ ಅವರ ಕೈ ಹಿಡಿದ ರಾಹುಲ್ ಓಟ ಆರಂಭಿಸಿದರು. ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಡಿಕೆಶಿ ಓಡಿದರಾದರೂ ಅವರ ಮುಖದಲ್ಲಿ ಸುಸ್ತು ಎದ್ದು ಕಾಣುತ್ತಿತ್ತು. ಮರು ದಿನ ಯಾತ್ರೆಯ ಮಧ್ಯೆ ಸಿಕ್ಕ ಸಣ್ಣ ಹುಡುಗನೊಬ್ಬನ ಜತೆ ಸ್ಪರ್ಧೆಗೆ ಇಳಿದ ರಾಹುಲ್ ಆತನ ಜತೆ ʼದಂಡʼ ತೆಗೆದು ಖುಷಿಪಟ್ಟರು. ಆದರೆ ಆಟದಲ್ಲಿ ಭಾಗಿಯಾದ ಡಿಕೆಶಿ ಪಾಲಿಗೆ ಇದು ನಿಜಕ್ಕೂʼದಂಡʼನೆಯಂತಿತ್ತು.

ಏನೇ ಆದರೂ ಯಾತ್ರೆಯುದ್ದಕ್ಕೂ ರಾಹುಲ್ ತೋರಿಸುತ್ತಿರುವ ಉತ್ಸಾಹ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸಿಗೆ ಕಾರಣವಾಗಿದೆ. ಯುವ ಜನತೆ ಈ ಉತ್ಸಾಹದಲ್ಲಿ ಭಾಗಿಯಾಗುತ್ತಿದ್ದಾರೆ.

andolanait

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

25 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

36 mins ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago