ಆಂದೋಲನ ವಿಶೇಷ
ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ ಮಾಡುವ ರಾಹುಲ್ ಗಾಂಧಿ ತಮ್ಮ 52ನೇ ವಯಸ್ಸಿನಲ್ಲೂ ಯುವಕನಂತೆ ಕಾಣಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ದೀರ್ಘವಾದ ಪಾದಯಾತ್ರೆ ಕೈಗೊಂಡರೂ ಅವರ ಮುಖದಲ್ಲಿ ಎಂದೂ ಸುಸ್ತು ಕಂಡಿಲ್ಲ.
ಆದರೆ ಕಾಂಗ್ರೆಸ್ ನಾಯಕನ ಈ ಫಿಟ್ನೆಸ್ ಮಂತ್ರ ರಾಜ್ಯ ನಾಯಕರಿಗೆ ಪೀಕಲಾಟ ತಂದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ವೇಗದ ಹೆಜ್ಜೆ ಹಾಕುವ ರಾಹುಲ್ ಜತೆಗೆ ನಡೆಯುವುದೇ ರಾಜ್ಯ ನಾಯಕರಿಗೆ ಸವಾಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ಗೆ ಜತೆಜತೆಯಾಗಿ ಹೆಜ್ಜೆ ಹಾಕುತ್ತಾ ಬಂದಿದ್ದಾರೆ.
ಆದರೆ ಪಕ್ಷದ ಪಾಲಿಗೆ ಇನ್ನೂ ಯುವ ನಾಯಕನಾಗಿರುವ ರಾಹುಲ್ ಜತೆ ಹೆಜ್ಜೆ ಹಾಕುವುದು ಇಬ್ಬರೂ ನಾಯಕರಿಗೂ ತುಸು ಕಷ್ಟವೆನಿಸಿದೆ. ಇ.ಡಿ ವಿಚಾರಣೆಯ ಸಂದರ್ಭದಲ್ಲಿ ಗೈರುಹಾಜರಾಗಿದ್ದು ಬಿಟ್ಟರೆ ಡಿಕೆಶಿ ಅವರು ರಾಹುಲ್ ಜತೆಗೆ ಸಾಗುತ್ತಾ ಬಂದಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಜತೆಗಿನ ಮೀಸಲಾತಿ ಸಭೆ ಸೇರಿದಂತೆ ಒಂದಷ್ಟು ನೆಪ ಇಟ್ಟುಕೊಂಡು ಮಧ್ಯೆ, ಬಿಡುವು ಮಾಡಿಕೊಂಡಿದ್ದಾರೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಜೋಡೋ ಯಾತ್ರೆ ಸಾಗುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಇದೇ ಅನುಭವವಾಯಿತು. ಕಾಂಗ್ರೆಸ್ ಧ್ವಜ ಹಿಡಿದು ಮುಂದೆ ಸಾಗುತ್ತಿದ್ದ ಡಿಕೆಶಿ ಅವರ ಕೈ ಹಿಡಿದ ರಾಹುಲ್ ಓಟ ಆರಂಭಿಸಿದರು. ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಡಿಕೆಶಿ ಓಡಿದರಾದರೂ ಅವರ ಮುಖದಲ್ಲಿ ಸುಸ್ತು ಎದ್ದು ಕಾಣುತ್ತಿತ್ತು. ಮರು ದಿನ ಯಾತ್ರೆಯ ಮಧ್ಯೆ ಸಿಕ್ಕ ಸಣ್ಣ ಹುಡುಗನೊಬ್ಬನ ಜತೆ ಸ್ಪರ್ಧೆಗೆ ಇಳಿದ ರಾಹುಲ್ ಆತನ ಜತೆ ʼದಂಡʼ ತೆಗೆದು ಖುಷಿಪಟ್ಟರು. ಆದರೆ ಆಟದಲ್ಲಿ ಭಾಗಿಯಾದ ಡಿಕೆಶಿ ಪಾಲಿಗೆ ಇದು ನಿಜಕ್ಕೂʼದಂಡʼನೆಯಂತಿತ್ತು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…