ಆಂದೋಲನ ವಿಶೇಷ
ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ ಮಾಡುವ ರಾಹುಲ್ ಗಾಂಧಿ ತಮ್ಮ 52ನೇ ವಯಸ್ಸಿನಲ್ಲೂ ಯುವಕನಂತೆ ಕಾಣಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ದೀರ್ಘವಾದ ಪಾದಯಾತ್ರೆ ಕೈಗೊಂಡರೂ ಅವರ ಮುಖದಲ್ಲಿ ಎಂದೂ ಸುಸ್ತು ಕಂಡಿಲ್ಲ.
ಆದರೆ ಕಾಂಗ್ರೆಸ್ ನಾಯಕನ ಈ ಫಿಟ್ನೆಸ್ ಮಂತ್ರ ರಾಜ್ಯ ನಾಯಕರಿಗೆ ಪೀಕಲಾಟ ತಂದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ವೇಗದ ಹೆಜ್ಜೆ ಹಾಕುವ ರಾಹುಲ್ ಜತೆಗೆ ನಡೆಯುವುದೇ ರಾಜ್ಯ ನಾಯಕರಿಗೆ ಸವಾಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ಗೆ ಜತೆಜತೆಯಾಗಿ ಹೆಜ್ಜೆ ಹಾಕುತ್ತಾ ಬಂದಿದ್ದಾರೆ.
ಆದರೆ ಪಕ್ಷದ ಪಾಲಿಗೆ ಇನ್ನೂ ಯುವ ನಾಯಕನಾಗಿರುವ ರಾಹುಲ್ ಜತೆ ಹೆಜ್ಜೆ ಹಾಕುವುದು ಇಬ್ಬರೂ ನಾಯಕರಿಗೂ ತುಸು ಕಷ್ಟವೆನಿಸಿದೆ. ಇ.ಡಿ ವಿಚಾರಣೆಯ ಸಂದರ್ಭದಲ್ಲಿ ಗೈರುಹಾಜರಾಗಿದ್ದು ಬಿಟ್ಟರೆ ಡಿಕೆಶಿ ಅವರು ರಾಹುಲ್ ಜತೆಗೆ ಸಾಗುತ್ತಾ ಬಂದಿದ್ದಾರೆ.
ಸಿದ್ದರಾಮಯ್ಯ ಅವರು ಸಿಎಂ ಜತೆಗಿನ ಮೀಸಲಾತಿ ಸಭೆ ಸೇರಿದಂತೆ ಒಂದಷ್ಟು ನೆಪ ಇಟ್ಟುಕೊಂಡು ಮಧ್ಯೆ, ಬಿಡುವು ಮಾಡಿಕೊಂಡಿದ್ದಾರೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಜೋಡೋ ಯಾತ್ರೆ ಸಾಗುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಇದೇ ಅನುಭವವಾಯಿತು. ಕಾಂಗ್ರೆಸ್ ಧ್ವಜ ಹಿಡಿದು ಮುಂದೆ ಸಾಗುತ್ತಿದ್ದ ಡಿಕೆಶಿ ಅವರ ಕೈ ಹಿಡಿದ ರಾಹುಲ್ ಓಟ ಆರಂಭಿಸಿದರು. ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಡಿಕೆಶಿ ಓಡಿದರಾದರೂ ಅವರ ಮುಖದಲ್ಲಿ ಸುಸ್ತು ಎದ್ದು ಕಾಣುತ್ತಿತ್ತು. ಮರು ದಿನ ಯಾತ್ರೆಯ ಮಧ್ಯೆ ಸಿಕ್ಕ ಸಣ್ಣ ಹುಡುಗನೊಬ್ಬನ ಜತೆ ಸ್ಪರ್ಧೆಗೆ ಇಳಿದ ರಾಹುಲ್ ಆತನ ಜತೆ ʼದಂಡʼ ತೆಗೆದು ಖುಷಿಪಟ್ಟರು. ಆದರೆ ಆಟದಲ್ಲಿ ಭಾಗಿಯಾದ ಡಿಕೆಶಿ ಪಾಲಿಗೆ ಇದು ನಿಜಕ್ಕೂʼದಂಡʼನೆಯಂತಿತ್ತು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…