ಜಿಲ್ಲೆಗಳು

2023ರ ವೇಳೆಗೆ ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ : ಮಹಮ್ಮದ್ ನಲಪಾಡ್

ಹನೂರು: 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಜೊತೆಗೆ ರಾಷ್ಟ್ರೀಯ ನಾಯಕ ರಾಹುಲ್‍ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು.

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ ಉದ್ಯೋಗ ಸೃಷ್ಠಿ ಹಾಗೂ ಭಾರತ್ ಜೋಡೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಗಳಿಸಿದೆ. ಅಲ್ಲದೇ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯವನ್ನು ತಂದು ಕೊಡುವಲ್ಲಿ ಶ್ರಮಿಸಿರುವ ಶ್ರಮ ಅಪಾರ. ಆದರೆ ಬಿಜೆಪಿ ಪಕ್ಷ ಜಾತಿ ಜಾತಿಯ ನಡುವೆ ವಿಷ ಬೀಜವನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದ್ದು, ಸಮಾಜದಲ್ಲಿ ಅಶಾಂತಿಯನ್ನು ತಂದೋಡ್ಡುತ್ತಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡುತ್ತೇನೆಂದು ಭರವಸೆ ನೀಡದ್ದರು. ಆ ಭರವಸೆ ಸುಳ್ಳಾಗಿದೆ. ಇನ್ನು ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಇದರಿಂದ ಜನತೆಗೆ ಉತ್ತಮ ಆಡಳಿತವನ್ನು ನೀಡಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಈಗಾಗಲೇ ಜನರಿಗೆ ಮನದಟ್ಟಾಗಿದೆ. ಈತನ್ಮಧ್ಯೆ ರಾಹುಲ್‍ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಆಗಾಗಿ 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

ಹನೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್ ಮಾತನಾಡಿ, ವಿದ್ಯಾವಂತ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ‘ಉದ್ಯೋಗ ಸೃಷ್ಟಿ, ಇನ್’ ವೆಬ್ ತೆರೆಯಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಸರನ್ನು ನೊಂದಾಯಿಸಿಕೊಳ್ಳುವುದರ ಮೂಲಕ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಸಮಿತಿ ರಾಜ್ಯ ಉಪಾಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ವಿಜಯ ಆನಂದ್, ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್, ಜಿಲ್ಲಾ ಉಸ್ತುವಾರಿ ಇರ್ಷಾದ್ ಖಾನ್, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ರಾಮಾಪುರ ಕಾಂಗ್ರೆಸ್ ಯೂತ್ ಸಮಿತಿ ಅಧ್ಯಕ್ಷ ಸುರೇಶ್, ಗ್ರಾಪಂ ಅಧ್ಯಕ್ಷೆ ಶಾಂತಿ, ಉಪಾಧ್ಯಕ್ಷ ರಾಮಲಿಂಗಂ, ಸದಸ್ಯರು ಹಾಗೂ ಇನ್ನಿತರರು ಇದ್ದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

46 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

52 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

56 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago