ಹನೂರು: 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಜೊತೆಗೆ ರಾಷ್ಟ್ರೀಯ ನಾಯಕ ರಾಹುಲ್ಗಾಂಧಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ಧ ಉದ್ಯೋಗ ಸೃಷ್ಠಿ ಹಾಗೂ ಭಾರತ್ ಜೋಡೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಗಳಿಸಿದೆ. ಅಲ್ಲದೇ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯವನ್ನು ತಂದು ಕೊಡುವಲ್ಲಿ ಶ್ರಮಿಸಿರುವ ಶ್ರಮ ಅಪಾರ. ಆದರೆ ಬಿಜೆಪಿ ಪಕ್ಷ ಜಾತಿ ಜಾತಿಯ ನಡುವೆ ವಿಷ ಬೀಜವನ್ನು ಬಿತ್ತುವ ಕಾರ್ಯವನ್ನು ಮಾಡುತ್ತಿದ್ದು, ಸಮಾಜದಲ್ಲಿ ಅಶಾಂತಿಯನ್ನು ತಂದೋಡ್ಡುತ್ತಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ 2 ಕೋಟಿ ವಿದ್ಯಾವಂತ ಯುವಕರಿಗೆ ಉದ್ಯೋಗ ನೀಡುತ್ತೇನೆಂದು ಭರವಸೆ ನೀಡದ್ದರು. ಆ ಭರವಸೆ ಸುಳ್ಳಾಗಿದೆ. ಇನ್ನು ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಇದರಿಂದ ಜನತೆಗೆ ಉತ್ತಮ ಆಡಳಿತವನ್ನು ನೀಡಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಈಗಾಗಲೇ ಜನರಿಗೆ ಮನದಟ್ಟಾಗಿದೆ. ಈತನ್ಮಧ್ಯೆ ರಾಹುಲ್ಗಾಂಧಿ ಅವರು ಭಾರತವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು, ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಆಗಾಗಿ 2023ರ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಹನೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್ ಮಾತನಾಡಿ, ವಿದ್ಯಾವಂತ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ‘ಉದ್ಯೋಗ ಸೃಷ್ಟಿ, ಇನ್’ ವೆಬ್ ತೆರೆಯಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಸರನ್ನು ನೊಂದಾಯಿಸಿಕೊಳ್ಳುವುದರ ಮೂಲಕ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಸಮಿತಿ ರಾಜ್ಯ ಉಪಾಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ವಿಜಯ ಆನಂದ್, ಜಿಲ್ಲಾಧ್ಯಕ್ಷ ಅಬ್ದುಲ್ ಅಜೀಜ್, ಜಿಲ್ಲಾ ಉಸ್ತುವಾರಿ ಇರ್ಷಾದ್ ಖಾನ್, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ರಾಮಾಪುರ ಕಾಂಗ್ರೆಸ್ ಯೂತ್ ಸಮಿತಿ ಅಧ್ಯಕ್ಷ ಸುರೇಶ್, ಗ್ರಾಪಂ ಅಧ್ಯಕ್ಷೆ ಶಾಂತಿ, ಉಪಾಧ್ಯಕ್ಷ ರಾಮಲಿಂಗಂ, ಸದಸ್ಯರು ಹಾಗೂ ಇನ್ನಿತರರು ಇದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…