ಜಿಲ್ಲೆಗಳು

ರಾಹುಲ್​ ಗಾಂಧಿ ಪತ್ರದ ಬಳಿಕ ಆನೆಗೆ ಚಿಕಿತ್ಸೆ: ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆ

ಮೈಸೂರು :ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು ಅದರಂತೆ ಈಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ ನೀಡಿ ತಾಯಿ ಜೊತೆ ಕಾಡಿಗೆ ಬಿಡಲಾಗಿತ್ತು.ಆರೋಗ್ಯ ಸುಧಾರಣೆ ಕಂಡ ನಂತರ ಆನೆ ಮರಿ ಬಹಳ ಚಟುವಟಿಕೆಯಿಂದ ಇತ್ತು. ಆನೆ ಮತ್ತು ಅದರ ಮರಿಗೆ ಚಿಕಿತ್ಸೆ ನೀಡಿದ ನಂತರ ಅರಣ್ಯಕ್ಕೆ ಬಿಡಲಾಗಿತ್ತು. ಆದರೆ ಈಗ ಮೂರು ದಿನಗಳಿಂದ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ತಾಯಿ ಮತ್ತು ಜೊತೆಗಿದ್ದ ಆನೆ ಮರಿ ಈಗ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಕಾಣಿಸುತ್ತಿಲ್ಲ. ಅದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರತರಾಗಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಐಸಿಸಿ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದರು. ಈ ವೇಳೆ ಗಾಯಗೊಂಡಿದ್ದ ಆನೆ ಮರಿಯೊಂದು ಅವರ ಕಣ್ಣಿಗೆ ಬಿದ್ದಿತ್ತು. ಬಳಿಕ ಅವರು ತಾಯಿ ಆನೆ ಮತ್ತು ಅದರ ಗಾಯಗೊಂಡ ಮರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.ಆನೆ ಮರಿಗೆ ಚಿಕಿತ್ಸೆ ನೀಡುತ್ತಿರುವುದುಈ ಸಂಬಂಧ ರಾಹುಲ್ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಆನೆ ಮತ್ತು ಅದರ ಮರಿಗೆ ಸಂಪೂರ್ಣ ಕಾಳಜಿ ಮತ್ತು ಚಿಕಿತ್ಸೆ ನೀಡಲಾಗುವುದು ಎಂದಿದ್ದರು. ಅಲ್ಲದೆ, ನಾಗರಹೊಳೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಮೇರೆಗೆ ಆನೆ ಹಾಗೂ ಮರಿಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಸ್ವಲ್ಪಮಟ್ಟಿಗಿನ ಸುಧಾರಣೆ ಕಂಡುಬಂದಿದೆ. ಚಿಕಿತ್ಸೆ ಬಳಿಕ ತಾಯಿ ಮತ್ತು ಮರಿ ಆನೆಯ ಮೇಲೆ ನಿಗಾ ವಹಿಸಲಾಗಿತ್ತು. ಆರೋಗ್ಯ ಸ್ಥಿತಿಯ ಬಗ್ಗೆ ಚಿಕಿತ್ಸೆ ಉಸ್ತುವಾರಿಯನ್ನು ಆರ್​​ಎಫ್​ಒ ಮತ್ತು ಪಶು ವೈದ್ಯರ ತಂಡಕ್ಕೆ ನೀಡಲಾಗಿತ್ತು. ಆದರೀಗ ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆಯಾಗಿದೆ.

 

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

3 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

3 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

4 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

4 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

5 hours ago