ಜಿಲ್ಲೆಗಳು

ರಾಹುಲ್​ ಗಾಂಧಿ ಪತ್ರದ ಬಳಿಕ ಆನೆಗೆ ಚಿಕಿತ್ಸೆ: ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆ

ಮೈಸೂರು :ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು ಅದರಂತೆ ಈಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ ನೀಡಿ ತಾಯಿ ಜೊತೆ ಕಾಡಿಗೆ ಬಿಡಲಾಗಿತ್ತು.ಆರೋಗ್ಯ ಸುಧಾರಣೆ ಕಂಡ ನಂತರ ಆನೆ ಮರಿ ಬಹಳ ಚಟುವಟಿಕೆಯಿಂದ ಇತ್ತು. ಆನೆ ಮತ್ತು ಅದರ ಮರಿಗೆ ಚಿಕಿತ್ಸೆ ನೀಡಿದ ನಂತರ ಅರಣ್ಯಕ್ಕೆ ಬಿಡಲಾಗಿತ್ತು. ಆದರೆ ಈಗ ಮೂರು ದಿನಗಳಿಂದ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ತಾಯಿ ಮತ್ತು ಜೊತೆಗಿದ್ದ ಆನೆ ಮರಿ ಈಗ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಕಾಣಿಸುತ್ತಿಲ್ಲ. ಅದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರತರಾಗಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಐಸಿಸಿ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದರು. ಈ ವೇಳೆ ಗಾಯಗೊಂಡಿದ್ದ ಆನೆ ಮರಿಯೊಂದು ಅವರ ಕಣ್ಣಿಗೆ ಬಿದ್ದಿತ್ತು. ಬಳಿಕ ಅವರು ತಾಯಿ ಆನೆ ಮತ್ತು ಅದರ ಗಾಯಗೊಂಡ ಮರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.ಆನೆ ಮರಿಗೆ ಚಿಕಿತ್ಸೆ ನೀಡುತ್ತಿರುವುದುಈ ಸಂಬಂಧ ರಾಹುಲ್ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಆನೆ ಮತ್ತು ಅದರ ಮರಿಗೆ ಸಂಪೂರ್ಣ ಕಾಳಜಿ ಮತ್ತು ಚಿಕಿತ್ಸೆ ನೀಡಲಾಗುವುದು ಎಂದಿದ್ದರು. ಅಲ್ಲದೆ, ನಾಗರಹೊಳೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಮೇರೆಗೆ ಆನೆ ಹಾಗೂ ಮರಿಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಸ್ವಲ್ಪಮಟ್ಟಿಗಿನ ಸುಧಾರಣೆ ಕಂಡುಬಂದಿದೆ. ಚಿಕಿತ್ಸೆ ಬಳಿಕ ತಾಯಿ ಮತ್ತು ಮರಿ ಆನೆಯ ಮೇಲೆ ನಿಗಾ ವಹಿಸಲಾಗಿತ್ತು. ಆರೋಗ್ಯ ಸ್ಥಿತಿಯ ಬಗ್ಗೆ ಚಿಕಿತ್ಸೆ ಉಸ್ತುವಾರಿಯನ್ನು ಆರ್​​ಎಫ್​ಒ ಮತ್ತು ಪಶು ವೈದ್ಯರ ತಂಡಕ್ಕೆ ನೀಡಲಾಗಿತ್ತು. ಆದರೀಗ ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆಯಾಗಿದೆ.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago