ಮೈಸೂರು :ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು ಅದರಂತೆ ಈಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ ನೀಡಿ ತಾಯಿ ಜೊತೆ ಕಾಡಿಗೆ ಬಿಡಲಾಗಿತ್ತು.ಆರೋಗ್ಯ ಸುಧಾರಣೆ ಕಂಡ ನಂತರ ಆನೆ ಮರಿ ಬಹಳ ಚಟುವಟಿಕೆಯಿಂದ ಇತ್ತು. ಆನೆ ಮತ್ತು ಅದರ ಮರಿಗೆ ಚಿಕಿತ್ಸೆ ನೀಡಿದ ನಂತರ ಅರಣ್ಯಕ್ಕೆ ಬಿಡಲಾಗಿತ್ತು. ಆದರೆ ಈಗ ಮೂರು ದಿನಗಳಿಂದ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ತಾಯಿ ಮತ್ತು ಜೊತೆಗಿದ್ದ ಆನೆ ಮರಿ ಈಗ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಕಾಣಿಸುತ್ತಿಲ್ಲ. ಅದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರತರಾಗಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…