ಜಿಲ್ಲೆಗಳು

ರಾಹುಲ್​ ಗಾಂಧಿ ಪತ್ರದ ಬಳಿಕ ಆನೆಗೆ ಚಿಕಿತ್ಸೆ: ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆ

ಮೈಸೂರು :ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಕುರಿತು ರಾಹುಲ್ ಗಾಂಧಿ ಅವರು ಪತ್ರ ಬರೆದಿದ್ದು, ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು ಅದರಂತೆ ಈಗ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆ ಮರಿಗೆ ಚಿಕಿತ್ಸೆ ನೀಡಿ ತಾಯಿ ಜೊತೆ ಕಾಡಿಗೆ ಬಿಡಲಾಗಿತ್ತು.ಆರೋಗ್ಯ ಸುಧಾರಣೆ ಕಂಡ ನಂತರ ಆನೆ ಮರಿ ಬಹಳ ಚಟುವಟಿಕೆಯಿಂದ ಇತ್ತು. ಆನೆ ಮತ್ತು ಅದರ ಮರಿಗೆ ಚಿಕಿತ್ಸೆ ನೀಡಿದ ನಂತರ ಅರಣ್ಯಕ್ಕೆ ಬಿಡಲಾಗಿತ್ತು. ಆದರೆ ಈಗ ಮೂರು ದಿನಗಳಿಂದ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ತಾಯಿ ಮತ್ತು ಜೊತೆಗಿದ್ದ ಆನೆ ಮರಿ ಈಗ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಕಾಣಿಸುತ್ತಿಲ್ಲ. ಅದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರತರಾಗಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಐಸಿಸಿ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ವೇಳೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ತೆರಳಿದ್ದರು. ಈ ವೇಳೆ ಗಾಯಗೊಂಡಿದ್ದ ಆನೆ ಮರಿಯೊಂದು ಅವರ ಕಣ್ಣಿಗೆ ಬಿದ್ದಿತ್ತು. ಬಳಿಕ ಅವರು ತಾಯಿ ಆನೆ ಮತ್ತು ಅದರ ಗಾಯಗೊಂಡ ಮರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.ಆನೆ ಮರಿಗೆ ಚಿಕಿತ್ಸೆ ನೀಡುತ್ತಿರುವುದುಈ ಸಂಬಂಧ ರಾಹುಲ್ ಮನವಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಆನೆ ಮತ್ತು ಅದರ ಮರಿಗೆ ಸಂಪೂರ್ಣ ಕಾಳಜಿ ಮತ್ತು ಚಿಕಿತ್ಸೆ ನೀಡಲಾಗುವುದು ಎಂದಿದ್ದರು. ಅಲ್ಲದೆ, ನಾಗರಹೊಳೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಮೇರೆಗೆ ಆನೆ ಹಾಗೂ ಮರಿಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದ್ದು, ಆರೋಗ್ಯದಲ್ಲಿ ಸ್ವಲ್ಪಮಟ್ಟಿಗಿನ ಸುಧಾರಣೆ ಕಂಡುಬಂದಿದೆ. ಚಿಕಿತ್ಸೆ ಬಳಿಕ ತಾಯಿ ಮತ್ತು ಮರಿ ಆನೆಯ ಮೇಲೆ ನಿಗಾ ವಹಿಸಲಾಗಿತ್ತು. ಆರೋಗ್ಯ ಸ್ಥಿತಿಯ ಬಗ್ಗೆ ಚಿಕಿತ್ಸೆ ಉಸ್ತುವಾರಿಯನ್ನು ಆರ್​​ಎಫ್​ಒ ಮತ್ತು ಪಶು ವೈದ್ಯರ ತಂಡಕ್ಕೆ ನೀಡಲಾಗಿತ್ತು. ಆದರೀಗ ಕಾಡಿಗೆ ಬಿಟ್ಟ ಮರಿ ತಾಯಿ ಜೊತೆ ನಾಪತ್ತೆಯಾಗಿದೆ.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago