ಜಿಲ್ಲೆಗಳು

ರಾಹುಲ್ ಗಾಂಧಿ ಅಕ್ಕಪಕ್ಕ ಇರುವವರೆಲ್ಲಾ ಬೇಲ್ ಮೇಲೆ ಇರುವವರು; ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಭಾರತ್ ಜೋಡೋ ಯಾತ್ರೆಗೆ ಪೊಲೀಸರು ಸಂಪೂರ್ಣ ಭದ್ರತೆ ಒದಗಿಸಿದ್ದಾರೆ. ಪಾದಯಾತ್ರೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ನವರ ಭಾರತ್ ಜೋಡೋಗೆ ನಮ್ಮದೇನೂ ಅಭ್ಯಂತರವಿಲ್ಲ, ಆದರೆ ಅನಾವಶ್ಯಕವಾಗಿ ಆರೋಪ ಮಾಡುವುದು ಸರಿಯಲ್ಲ. ರಾಹುಲ್ ಗಾಂಧಿ ಅವರ ಅಕ್ಕಪಕ್ಕ ಯಾರಿದ್ದಾರೆ? ಅವರೆಲ್ಲಾ ಬೇಲ್ ಮೇಲೆ ಇರುವವರು, ಕಾಂಗ್ರೆಸ್ ನವರು ಏನೂ ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನಿಸಿದರು.

ಆರೋಪ ಬಂದಾಕ್ಷಣ ಪೊಲೀಸ್ ಉನ್ನತ ಅಧಿಕಾರಿಗಳನ್ನೇ ಬಂಧಿಸಿದೆ. ಅದೇ ಕಾಂಗ್ರೆಸ್ ನವರು ಒಬ್ಬ ಪೇದೆಯನ್ನು ಕೂಡ ಬಂಧಿಸಲಿಲ್ಲ. 40% ಆರೋಪ ಮಾಡ್ತಾರಲ್ಲಾ ಅದರ ಒಂದೇಒಂದು ದಾಖಲೆ ಕೊಡ ಕೊಡಲಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಎಡಬಲ ಇರುವವರನ್ನೇ ಕೇಳಲಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಷ್ಟು ಪರ್ಸೆಂಟೆಜ್ ತೆಗೆದುಕೊಂಡಿದ್ದೀರಿ ಎಂದು? ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಬಾರದು ಎಂದರು.

ಬಾಲಿಷ ಹೇಳಿಕೆಗಳನ್ನು ನೀಡಬಾರದು. ರಾಹುಲ್ ಗಾಂಧಿ ಅವರು ತಮ್ಮ ಎಡಬಲದಲ್ಲಿ ಇರುವವರ ಕತೆ ಮೊದಲು ತಿಳಿದುಕೊಳ್ಳಲಿ. ಅಕ್ಕಪಕ್ಕದವರ ಮಾತು ಕೇಳಿದರೆ ಭಾರತ್ ಜೋಡೋ ಪೂರ್ಣ ಆಗಲ್ಲ. ಮಾಹಿತಿ ತೆಗೆದುಕೊಂಡು ಮಾತನಾಡಿ. ಯಾರೂ ಬ್ಯಾನರ್ ಹರಿದಿಲ್ಲ.‌ ಹೆಜ್ಜೆಹೆಜ್ಜೆಗೂ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ ಎಂದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

53 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

55 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

57 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago