ಜಿಲ್ಲೆಗಳು

ರಾಹುಲ್ ಗಾಂಧಿ ಅಕ್ಕಪಕ್ಕ ಇರುವವರೆಲ್ಲಾ ಬೇಲ್ ಮೇಲೆ ಇರುವವರು; ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಭಾರತ್ ಜೋಡೋ ಯಾತ್ರೆಗೆ ಪೊಲೀಸರು ಸಂಪೂರ್ಣ ಭದ್ರತೆ ಒದಗಿಸಿದ್ದಾರೆ. ಪಾದಯಾತ್ರೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ನವರ ಭಾರತ್ ಜೋಡೋಗೆ ನಮ್ಮದೇನೂ ಅಭ್ಯಂತರವಿಲ್ಲ, ಆದರೆ ಅನಾವಶ್ಯಕವಾಗಿ ಆರೋಪ ಮಾಡುವುದು ಸರಿಯಲ್ಲ. ರಾಹುಲ್ ಗಾಂಧಿ ಅವರ ಅಕ್ಕಪಕ್ಕ ಯಾರಿದ್ದಾರೆ? ಅವರೆಲ್ಲಾ ಬೇಲ್ ಮೇಲೆ ಇರುವವರು, ಕಾಂಗ್ರೆಸ್ ನವರು ಏನೂ ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನಿಸಿದರು.

ಆರೋಪ ಬಂದಾಕ್ಷಣ ಪೊಲೀಸ್ ಉನ್ನತ ಅಧಿಕಾರಿಗಳನ್ನೇ ಬಂಧಿಸಿದೆ. ಅದೇ ಕಾಂಗ್ರೆಸ್ ನವರು ಒಬ್ಬ ಪೇದೆಯನ್ನು ಕೂಡ ಬಂಧಿಸಲಿಲ್ಲ. 40% ಆರೋಪ ಮಾಡ್ತಾರಲ್ಲಾ ಅದರ ಒಂದೇಒಂದು ದಾಖಲೆ ಕೊಡ ಕೊಡಲಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಎಡಬಲ ಇರುವವರನ್ನೇ ಕೇಳಲಿ, ಕಾಂಗ್ರೆಸ್ ಸರ್ಕಾರ ಇದ್ದಾಗ ಎಷ್ಟು ಪರ್ಸೆಂಟೆಜ್ ತೆಗೆದುಕೊಂಡಿದ್ದೀರಿ ಎಂದು? ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸಬಾರದು ಎಂದರು.

ಬಾಲಿಷ ಹೇಳಿಕೆಗಳನ್ನು ನೀಡಬಾರದು. ರಾಹುಲ್ ಗಾಂಧಿ ಅವರು ತಮ್ಮ ಎಡಬಲದಲ್ಲಿ ಇರುವವರ ಕತೆ ಮೊದಲು ತಿಳಿದುಕೊಳ್ಳಲಿ. ಅಕ್ಕಪಕ್ಕದವರ ಮಾತು ಕೇಳಿದರೆ ಭಾರತ್ ಜೋಡೋ ಪೂರ್ಣ ಆಗಲ್ಲ. ಮಾಹಿತಿ ತೆಗೆದುಕೊಂಡು ಮಾತನಾಡಿ. ಯಾರೂ ಬ್ಯಾನರ್ ಹರಿದಿಲ್ಲ.‌ ಹೆಜ್ಜೆಹೆಜ್ಜೆಗೂ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ ಎಂದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago