ಜಿಲ್ಲೆಗಳು

ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ 38.6 ಮಿಮೀ ಮಳೆ!

ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ ೩೮.೬ ಮಿ.ಮೀ. ಮಳೆ!
ರಾತ್ರಿ ಇಡೀ ಸುರಿದು ಹೊಲಗದ್ದೆಗಳಲ್ಲಿ ಹರಿದಾಡಿದ ನೀರು…

ಚಾಮರಾಜನಗರ: ಜಿಲ್ಲೆಯಾದ್ಯಂತ ಹೊಲಗದ್ದೆಗಳಲ್ಲಿ ನೀರು ಹರಿದಾಡುವ ಮಟ್ಟಿಗೆ ಭಾನುವಾರ ರಾತ್ರಿ ಇಡೀ ಜೋರುಮಳೆಯಾಗಿದೆ.
ಭಾನುವಾರ ಬೆಳಿಗ್ಗೆ ೮.೩೦ರಿಂದ ಸೋಮವಾರ ಬೆಳಿಗ್ಗೆ ೮.೩೦ರವರೆಗಿನ ಕಳೆದ ೨೪ಗಂಟೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ೩೮.೬ಮಿಮೀ ಮಳೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ವಾಹಿತಿ ನೀಡಿದ್ದಾರೆ.

ಈ ಒಂದು ದಿನದ ಅವಧಿಯಲ್ಲಿ ವಾಡಿಕೆ ಪ್ರಕಾರ ೫.೭ಮಿಮೀ ಮಳೆಯಾಗಬೇಕಿತ್ತು. ಅದಕ್ಕಿಂತ ೩೨ಮಿಮೀ(ಶೇ.೫೭೭) ಹೆಚ್ಚುಬಿದ್ದಿದೆ! ಅನೇಕ ಕಡೆ ರಾತ್ರಿ ಶುರುವಾದ ಮಳೆ ಸೋಮವಾರ ಬೆಳಿಗ್ಗೆವರೆಗೂ ಒಂದೇ ಸಮನೆ ಧಾರಾಕಾರವಾಗಿ ಸುರಿದಿದೆ.
ಹೀಗಾಗಿ ತಗ್ಗು ಪ್ರದೇಶದ ಜಮೀನು ಮತ್ತು ಬೆಳೆಗಳಲ್ಲಿ ಮಳೆನೀರು ನಿಲ್ಲಲ್ಪಟ್ಟಿದ್ದು ಬಸಿ ಕಾಲುವೆ ಮುಖಾಂತರ ನೀರನ್ನು ರೈತರು ಹೊರಹಾಕುತ್ತಿದ್ದಾರೆ. ಸೋಮವಾರವೂ ಮೋಡಕವಿದ ವಾತಾವರಣ ಆವರಿಸಿತ್ತು. ಮಧ್ಯೆ ಮಧ್ಯೆ ಮಳೆಯೂ ಜಿನುಗಿತು. ಇಡೀದಿನ ನೇಸರನ ದರ್ಶನ ಆಗಲಿಲ್ಲ.
ಈ ಮಳೆಯಿಂದ ಭತ್ತ, ರಾಗಿ, ಮುಸುಕಿನಜೋಳ, ಕಬ್ಬು, ಬೆಳೆಗಳಿಗಲ್ಲದೆ ತೋಟಗಾರಿಕಾ ಬೆಳೆಗಳಾದ ಅರಿಶಿನ, ಬಾಳೆಗೆ ಅನುಕೂಲವಾಗಿದ್ದು ಹಸಿಕಡಲೆ ಬಿತ್ತನೆಗೂ ನೆರವಾಗಿದೆ. ಸೆಪ್ಟೆಂಬರ್ ಮೊದಲವಾರ ಮಳೆ ಅಬ್ಬರಿಸಿ ಕೆರೆ-ಕಟ್ಟೆ ಹಾಗೂ ಜಲಾಶುಂಗಳು ತುಂಬಿಹರಿದಿದ್ದವು. ಆನಂತರ ಭಾನುವಾರ ರಾತ್ರಿ ಜೋರುಮಳೆಯಾಗಿದೆ ಎಂದು ಹವಾವಾನ ಇಲಾಖೆ ಮೂಲಗಳು ತಿಳಿಸಿವೆ. ಯಳಂದೂರು ತಾಲ್ಲೂಕಿನಲ್ಲಿ ಕಳೆದ ೨೪ಗಂಟೆಯಲ್ಲಿ ವಾಡಿಕೆಗಿಂತ(೫.೪ಮಿಮೀ) ಶೇ.೮೨೦ರಷ್ಟು ಹೆಚ್ಚು ಮಳೆಯಾಗಿದೆ.


ತಾಲ್ಲೂಕುವಾರು ಮಳೆ ಬಿದ್ದ ವಿವರ
(ಕಳೆದ ೨೪ಗಂಟೆ ಅವಧಿಯಲ್ಲಿ )
ಚಾ.ನಗರ ೪೫.೯ ಮಿಮೀ
ಗುಂಡ್ಲುಪೇಟೆ ೪೦.೧ ಮಿಮೀ
ಕೊಳ್ಳೇಗಾಲ ೨೩.೪ ಮಿಮೀ
ಯಳಂದೂರು ೪೯.೭ ಮಿಮೀ
ಹನೂರು ೩೫.೧ ಮಿಮೀ


ಇನ್ನೂ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹಗುರದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಚಾ.ನಗರ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಹವಾವಾನ ತಜ್ಞ ಹೆಚ್.ಕೆ.ರಜತ್ ತಿಳಿಸಿದ್ದಾರೆ.

 

andolanait

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

33 mins ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

39 mins ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

55 mins ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

13 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

16 hours ago