ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ ೩೮.೬ ಮಿ.ಮೀ. ಮಳೆ!
ರಾತ್ರಿ ಇಡೀ ಸುರಿದು ಹೊಲಗದ್ದೆಗಳಲ್ಲಿ ಹರಿದಾಡಿದ ನೀರು…
ಚಾಮರಾಜನಗರ: ಜಿಲ್ಲೆಯಾದ್ಯಂತ ಹೊಲಗದ್ದೆಗಳಲ್ಲಿ ನೀರು ಹರಿದಾಡುವ ಮಟ್ಟಿಗೆ ಭಾನುವಾರ ರಾತ್ರಿ ಇಡೀ ಜೋರುಮಳೆಯಾಗಿದೆ.
ಭಾನುವಾರ ಬೆಳಿಗ್ಗೆ ೮.೩೦ರಿಂದ ಸೋಮವಾರ ಬೆಳಿಗ್ಗೆ ೮.೩೦ರವರೆಗಿನ ಕಳೆದ ೨೪ಗಂಟೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ೩೮.೬ಮಿಮೀ ಮಳೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ವಾಹಿತಿ ನೀಡಿದ್ದಾರೆ.
ಈ ಒಂದು ದಿನದ ಅವಧಿಯಲ್ಲಿ ವಾಡಿಕೆ ಪ್ರಕಾರ ೫.೭ಮಿಮೀ ಮಳೆಯಾಗಬೇಕಿತ್ತು. ಅದಕ್ಕಿಂತ ೩೨ಮಿಮೀ(ಶೇ.೫೭೭) ಹೆಚ್ಚುಬಿದ್ದಿದೆ! ಅನೇಕ ಕಡೆ ರಾತ್ರಿ ಶುರುವಾದ ಮಳೆ ಸೋಮವಾರ ಬೆಳಿಗ್ಗೆವರೆಗೂ ಒಂದೇ ಸಮನೆ ಧಾರಾಕಾರವಾಗಿ ಸುರಿದಿದೆ.
ಹೀಗಾಗಿ ತಗ್ಗು ಪ್ರದೇಶದ ಜಮೀನು ಮತ್ತು ಬೆಳೆಗಳಲ್ಲಿ ಮಳೆನೀರು ನಿಲ್ಲಲ್ಪಟ್ಟಿದ್ದು ಬಸಿ ಕಾಲುವೆ ಮುಖಾಂತರ ನೀರನ್ನು ರೈತರು ಹೊರಹಾಕುತ್ತಿದ್ದಾರೆ. ಸೋಮವಾರವೂ ಮೋಡಕವಿದ ವಾತಾವರಣ ಆವರಿಸಿತ್ತು. ಮಧ್ಯೆ ಮಧ್ಯೆ ಮಳೆಯೂ ಜಿನುಗಿತು. ಇಡೀದಿನ ನೇಸರನ ದರ್ಶನ ಆಗಲಿಲ್ಲ.
ಈ ಮಳೆಯಿಂದ ಭತ್ತ, ರಾಗಿ, ಮುಸುಕಿನಜೋಳ, ಕಬ್ಬು, ಬೆಳೆಗಳಿಗಲ್ಲದೆ ತೋಟಗಾರಿಕಾ ಬೆಳೆಗಳಾದ ಅರಿಶಿನ, ಬಾಳೆಗೆ ಅನುಕೂಲವಾಗಿದ್ದು ಹಸಿಕಡಲೆ ಬಿತ್ತನೆಗೂ ನೆರವಾಗಿದೆ. ಸೆಪ್ಟೆಂಬರ್ ಮೊದಲವಾರ ಮಳೆ ಅಬ್ಬರಿಸಿ ಕೆರೆ-ಕಟ್ಟೆ ಹಾಗೂ ಜಲಾಶುಂಗಳು ತುಂಬಿಹರಿದಿದ್ದವು. ಆನಂತರ ಭಾನುವಾರ ರಾತ್ರಿ ಜೋರುಮಳೆಯಾಗಿದೆ ಎಂದು ಹವಾವಾನ ಇಲಾಖೆ ಮೂಲಗಳು ತಿಳಿಸಿವೆ. ಯಳಂದೂರು ತಾಲ್ಲೂಕಿನಲ್ಲಿ ಕಳೆದ ೨೪ಗಂಟೆಯಲ್ಲಿ ವಾಡಿಕೆಗಿಂತ(೫.೪ಮಿಮೀ) ಶೇ.೮೨೦ರಷ್ಟು ಹೆಚ್ಚು ಮಳೆಯಾಗಿದೆ.
ತಾಲ್ಲೂಕುವಾರು ಮಳೆ ಬಿದ್ದ ವಿವರ
(ಕಳೆದ ೨೪ಗಂಟೆ ಅವಧಿಯಲ್ಲಿ )
ಚಾ.ನಗರ ೪೫.೯ ಮಿಮೀ
ಗುಂಡ್ಲುಪೇಟೆ ೪೦.೧ ಮಿಮೀ
ಕೊಳ್ಳೇಗಾಲ ೨೩.೪ ಮಿಮೀ
ಯಳಂದೂರು ೪೯.೭ ಮಿಮೀ
ಹನೂರು ೩೫.೧ ಮಿಮೀ
ಇನ್ನೂ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹಗುರದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಚಾ.ನಗರ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಹವಾವಾನ ತಜ್ಞ ಹೆಚ್.ಕೆ.ರಜತ್ ತಿಳಿಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…