ಜಿಲ್ಲೆಗಳು

ಭಾರಿ ಮಳೆ ಹಾಗೂ ಬೆಳೆ ಹಾನಿ ಸ್ಥಳಕ್ಕೆ ಶಾಸಕರ ಭೇಟಿ ಪರಿಶೀಲನೆ.

ಮೈಸೂರು : ಕಳೆದ ಒಂದೂವರೆ ತಿಂಗಳಿಂದ ಸತತವಾಗಿ ಭಾರಿ ಮಳೆಯಾಗಿ ನದಿಯಿಂದಾಗಿ ವರುಣ ಕ್ಷೇತ್ರದ ಹಲವೆಡೆ ಸಾಕಷ್ಟು ಹಾನಿ ಉಂಟಾಗಿದ್ದು ಈ ಸಂಬಂಧ ಇಂದು ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಬೆಳೆಗಳು ಹಾಗೂ ಗ್ರಾಮಗಳಲ್ಲಿ ಮನೆಗಳು ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಕುಸಿತಗೊಂಡಿರುವ ಮನೆಗಳನ್ನು ವೀಕ್ಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮನೆ, ಬೆಳೆಗಳನ್ನು ಕಳೆದುಕೊಂಡ ಸಾಕಷ್ಟು ಜನರು  ರೈತರ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಕಬಿನಿ ನದಿ ಪ್ರವಾಹದಲ್ಲಿ ರೈತರ ಬೆಳೆ ಹಾನಿಯ ಸ್ಥಳಗಳಿಗೆ ಭೇಟಿ ನೀಡಿದ್ದರು.

ಪರಿಹಾರ ಕೇಳಿ ಅರ್ಜಿ ಸಲ್ಲಿಸುತ್ತಿರುವುದು

ವರುಣ ಕ್ಷೇತ್ರದ ಸುತ್ತೂರು. ಆಲತ್ತೂರು. ಮಾಡಳ್ಳಿ. ಹೊಸಕೋಟೆ. ನಂದು ಗುಂದ. ಕುಪ್ಪೇಗಾಲ. ಸಿದ್ದರಾಮಹುಂಡಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರ ಜಮೀನುಗಳಿಗೆ, ಬೆಳೆ,ಮನೆಗಳನ್ನು ಪರಿಶೀಲಿಸಿದ್ದಾರೆ.

ಮಳೆಯಿಂದಾಗಿ ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಶ್ರೀಘ್ರದಲ್ಲಿ ಪರಿಹಾರ ದೊರಕಿಸಿಕೊಡಲು ಸರ್ಕಾರವನ್ನು ಒತ್ತಾಯಮಾಡಿ  ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸ್ಥಳದಲ್ಲಿದ್ದ ಅಧಿಕಾರಿಗಳಾದ ಸಹಾಯಕ ಕೃಷಿ ನಿರ್ದೇಶಕರಾದ ದೀಪಕ್ ಅವರಿಗೆ ರೈತರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ. ಎಸ್ಸಿ ಬಸವರಾಜ್. ಬ್ಲಾಕ್ ಅಧ್ಯಕ್ಷರಾದ. ರಂಗಸ್ವಾಮಿ, ರೈತ ಮುಖಂಡರಾದ. ಚಿಕ್ಕು ಸು. ಮಹದೇವಮ್ಮ. ಮಹೇಶ್. ಕೆಎಸ್ ಉಂಡಿ ರವಿ, ತಾಲ್ಲೂಕಿನ ಇತರ ಅಧಿಕಾರಿಗಳು ಹಾಜರಿದ್ದರು. ಸುತ್ತಮುತ್ತ ಗ್ರಾಮಗಳ ರೈತರು ಹಾಜರಿತ್ತು.

andolanait

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

2 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

2 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago