ಜಿಲ್ಲೆಗಳು

ಭಾರಿ ಮಳೆ ಹಾಗೂ ಬೆಳೆ ಹಾನಿ ಸ್ಥಳಕ್ಕೆ ಶಾಸಕರ ಭೇಟಿ ಪರಿಶೀಲನೆ.

ಮೈಸೂರು : ಕಳೆದ ಒಂದೂವರೆ ತಿಂಗಳಿಂದ ಸತತವಾಗಿ ಭಾರಿ ಮಳೆಯಾಗಿ ನದಿಯಿಂದಾಗಿ ವರುಣ ಕ್ಷೇತ್ರದ ಹಲವೆಡೆ ಸಾಕಷ್ಟು ಹಾನಿ ಉಂಟಾಗಿದ್ದು ಈ ಸಂಬಂಧ ಇಂದು ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರ ಬೆಳೆಗಳು ಹಾಗೂ ಗ್ರಾಮಗಳಲ್ಲಿ ಮನೆಗಳು ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಕುಸಿತಗೊಂಡಿರುವ ಮನೆಗಳನ್ನು ವೀಕ್ಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮನೆ, ಬೆಳೆಗಳನ್ನು ಕಳೆದುಕೊಂಡ ಸಾಕಷ್ಟು ಜನರು  ರೈತರ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಕಬಿನಿ ನದಿ ಪ್ರವಾಹದಲ್ಲಿ ರೈತರ ಬೆಳೆ ಹಾನಿಯ ಸ್ಥಳಗಳಿಗೆ ಭೇಟಿ ನೀಡಿದ್ದರು.

ಪರಿಹಾರ ಕೇಳಿ ಅರ್ಜಿ ಸಲ್ಲಿಸುತ್ತಿರುವುದು

ವರುಣ ಕ್ಷೇತ್ರದ ಸುತ್ತೂರು. ಆಲತ್ತೂರು. ಮಾಡಳ್ಳಿ. ಹೊಸಕೋಟೆ. ನಂದು ಗುಂದ. ಕುಪ್ಪೇಗಾಲ. ಸಿದ್ದರಾಮಹುಂಡಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರ ಜಮೀನುಗಳಿಗೆ, ಬೆಳೆ,ಮನೆಗಳನ್ನು ಪರಿಶೀಲಿಸಿದ್ದಾರೆ.

ಮಳೆಯಿಂದಾಗಿ ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಶ್ರೀಘ್ರದಲ್ಲಿ ಪರಿಹಾರ ದೊರಕಿಸಿಕೊಡಲು ಸರ್ಕಾರವನ್ನು ಒತ್ತಾಯಮಾಡಿ  ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸ್ಥಳದಲ್ಲಿದ್ದ ಅಧಿಕಾರಿಗಳಾದ ಸಹಾಯಕ ಕೃಷಿ ನಿರ್ದೇಶಕರಾದ ದೀಪಕ್ ಅವರಿಗೆ ರೈತರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ. ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ. ಎಸ್ಸಿ ಬಸವರಾಜ್. ಬ್ಲಾಕ್ ಅಧ್ಯಕ್ಷರಾದ. ರಂಗಸ್ವಾಮಿ, ರೈತ ಮುಖಂಡರಾದ. ಚಿಕ್ಕು ಸು. ಮಹದೇವಮ್ಮ. ಮಹೇಶ್. ಕೆಎಸ್ ಉಂಡಿ ರವಿ, ತಾಲ್ಲೂಕಿನ ಇತರ ಅಧಿಕಾರಿಗಳು ಹಾಜರಿದ್ದರು. ಸುತ್ತಮುತ್ತ ಗ್ರಾಮಗಳ ರೈತರು ಹಾಜರಿತ್ತು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago