ಜಿಲ್ಲೆಗಳು

15 ದಿನದ ಮಳೆಯಿಂದಾಗಿ 100 ಕೋಟಿ ರೂ ನಷ್ಟ : ಜಿಟಿಡಿ

ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ ಬಗ್ಗೆ ಸೂಕ್ತವಾದ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. 

ಮುಂದುವರಿದು ನಮ್ಮ ವ್ಯಾಪ್ತಿಯಲ್ಲಿ ಸಾಕಷ್ಟು  ಕೆರೆಗಳು ತುಂಬಿದ್ದು, ಬಹುತೇಕ ಕೆರೆಗಳು ಕೋಡಿ ಬಿದ್ದಿವೆ ಇದರಿಂದಾಗಿ ಹಲವಾರು ಬಹುಪಾಲು ಕೃಷಿ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಮಳೆಯಿಂದಾಗಿ ಸುಮಾರು 35 ಮನೆಗಳು ಹಾನಿಯಾಗಿವೆ, ಈ ಹಾನಿಯನ್ನು ಕುರಿತ ಮಾಹಿತಿಯನ್ನು ಸ್ಥಳೀಯ ಆಡಳಿತವು ಸಂಗ್ರಹ ಮಾಡುತ್ತಿದ್ದು, ಅಗತ್ಯ ಪರಿಹಾರವನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ  ಗೌತಮ್‌, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ತಹಶೀಲ್ದಾರ್‌ ಗಿರೀಶ್‌ ಇದ್ದರು.

andolanait

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

2 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

3 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

3 hours ago