ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ ಬಗ್ಗೆ ಸೂಕ್ತವಾದ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂದುವರಿದು ನಮ್ಮ ವ್ಯಾಪ್ತಿಯಲ್ಲಿ ಸಾಕಷ್ಟು ಕೆರೆಗಳು ತುಂಬಿದ್ದು, ಬಹುತೇಕ ಕೆರೆಗಳು ಕೋಡಿ ಬಿದ್ದಿವೆ ಇದರಿಂದಾಗಿ ಹಲವಾರು ಬಹುಪಾಲು ಕೃಷಿ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಮಳೆಯಿಂದಾಗಿ ಸುಮಾರು 35 ಮನೆಗಳು ಹಾನಿಯಾಗಿವೆ, ಈ ಹಾನಿಯನ್ನು ಕುರಿತ ಮಾಹಿತಿಯನ್ನು ಸ್ಥಳೀಯ ಆಡಳಿತವು ಸಂಗ್ರಹ ಮಾಡುತ್ತಿದ್ದು, ಅಗತ್ಯ ಪರಿಹಾರವನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ತಹಶೀಲ್ದಾರ್ ಗಿರೀಶ್ ಇದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…