ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ ಬಗ್ಗೆ ಸೂಕ್ತವಾದ ವರದಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಮುಂದುವರಿದು ನಮ್ಮ ವ್ಯಾಪ್ತಿಯಲ್ಲಿ ಸಾಕಷ್ಟು ಕೆರೆಗಳು ತುಂಬಿದ್ದು, ಬಹುತೇಕ ಕೆರೆಗಳು ಕೋಡಿ ಬಿದ್ದಿವೆ ಇದರಿಂದಾಗಿ ಹಲವಾರು ಬಹುಪಾಲು ಕೃಷಿ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಮಳೆಯಿಂದಾಗಿ ಸುಮಾರು 35 ಮನೆಗಳು ಹಾನಿಯಾಗಿವೆ, ಈ ಹಾನಿಯನ್ನು ಕುರಿತ ಮಾಹಿತಿಯನ್ನು ಸ್ಥಳೀಯ ಆಡಳಿತವು ಸಂಗ್ರಹ ಮಾಡುತ್ತಿದ್ದು, ಅಗತ್ಯ ಪರಿಹಾರವನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಉಪವಿಭಾಗಾಧಿಕಾರಿ ಕಮಲಾಬಾಯಿ ಸೇರಿದಂತೆ ತಹಶೀಲ್ದಾರ್ ಗಿರೀಶ್ ಇದ್ದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…