ಜಿಲ್ಲೆಗಳು

ದಸರೆ ಸಂಭ್ರಮಕ್ಕೆ ಮಳೆ ಅಡ್ಡಿ ?

ಮೈಸೂರು: ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರದಿಂದ ರಾಜ್ಯದ ನಾನಾ ಕಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಷ್ಟೇ ಅಲ್ಲ. ಈಶಾನ್ಯ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ ಅಕ್ಟೋಬರ್ನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿ ಮತ್ತು ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದೆ.ಇದರಿಂದಾಗಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.

ಎರಡು ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಕಲಬುರಗಿ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರ್ನಾಟಕದ ಕೆಲವು ಭಾಗದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ. ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಕೆಎಸ್ಎನ್ಎಂಡಿಸಿ ಹೇಳಿದೆ.

ಕರ್ನಾಟಕದಲ್ಲಿ ಈ ಋತುವಿನಲ್ಲಿ ಶೇ.29ರಷ್ಟು ಅಧಿಕ ಮಳೆಯಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ ಸಾಮಾನ್ಯ 831.8 ಮಿ.ಮೀ ವಿರುದ್ಧವಾಗಿ 1,075.2 ಮಿಮೀ ಮಳೆಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವಾಡಿಕೆ ಮಳೆ 550 ಮಿ.ಮೀ ವಿರುದ್ಧವಾಗಿ 1,066 ಮಿ.ಮೀ ಮಳೆಯಾಗಿದೆ.

andolana

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

1 min ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

9 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago