ಜಿಲ್ಲೆಗಳು

ಚಾಮರಾಜನಗರ ಜಿಲ್ಲೆಯಲ್ಲಿ ಮಂಜಿನಮಳೆ!

ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ದಟ್ಟ ಮಂಜಿನ ಮಳೆಯ ಸುರಿದಿದ್ದು ಬೆಳಿಗ್ಗೆ ೮.೩೦ರವರೆಗೂ ಮಂಜು ಕವಿದಿತ್ತು. ಇದರೊಂದಿಗೆ ಚಳಿಯೂ ಶುರುವಾಗಿದೆ.

ಕೆಲದಿನಗಳಿಂದಲೇ ಇಬ್ಬನಿ ಬೀಳುತ್ತಿದೆಯಾದರೂ ಬುಧವಾರದ ಮಟ್ಟಿಗೆ ಮಂಜು ಸುರಿದಿರಲಿಲ್ಲ. ಪ್ರಖರ ಬಿಸಿಲು ಠಳಾಯಿಸುವವರೆಗೂ ಮಂಜಿನ ಕಾರಣದಿಂದಾಗಿ ವಾಹನಗಳು ಲೈಟ್ ಹಾಕಿಕೊಂಡೇ ಸಂಚರಿಸಬೇಕಾಯಿತು.

ವಾಯುವಿಹಾರ ಮಾಡುವವರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆಜ್ಜೆ ಹಾಕಬೇಕಾಯಿತು. ಇಬ್ಬನಿ ಹಿನ್ನೆಲೆಯಲ್ಲಿ ರಸ್ತೆಬದಿಯಲ್ಲಿ ವಾಕಿಂಗ್ ಮಾಡುವವರು ಎಚ್ಚರಿಕೆ ವಹಿಸಬೇಕಿದೆ. ಮಂಜು ಕವಿದಾಗ ತೀರಾ ಸನಿಹಕ್ಕೆ ಬರುವವರೆಗೂ ಮುಂದೆ ಏನಿದೆ ಎಂಬುದೇ ಗೊತ್ತಾಗುವುದಿಲ್ಲ. ಹೀಗಾಗಿ ಹಿಮದ ಈ ಸಂದರ್ಭ ರಸ್ತೆಬದಿಯಲ್ಲಿ ವಾಯುವಿಹಾರ ಮಾಡದಿರುವುದೇ ಸೂಕ್ತ.

ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗಿ ಕೆರೆಕಟ್ಟೆ ಹಾಗೂ ಜಲಾಶಯಗಳು ಭರ್ತಿ ಕಂಡಿರುವುದರಿಂದ ಇತರೆಡೆಗಿಂತ ಈ ನೀರಿನ ಪ್ರದೇಶಗಳಲ್ಲಿ ಇಬ್ಬನಿ ತುಸು ಹೆಚ್ಚಾಗಿಯೇ ಬೀಳತೊಡಗಿದೆ. ಆದ ಕಾರಣ ನೀರು ಹರಿದಾಡುವ ಭಾಗಗಳಲ್ಲಿನ ಜನರು ಅದಾಗಲೇ ಬೆಚ್ಚನೆಯ ಉಡುಪುಗಳ ಮೊರೆ ಹೋಗುವಂತಾಗಿದೆ.
ಆರೋಗ್ಯದ ಮೇಲೂ ಇಬ್ಬನಿ ಗಂಭೀರ ಪರಿಣಾಮ ಬೀರುತ್ತದೆ. ತಲೆನೋವು, ನೆಗಡಿ ಹಾಗೂ ಜ್ವರಕ್ಕೂ ಕಾರಣವಾಗಲಿದೆ. ಈ ಹಿನ್ನೆಲೆಯಲ್ಲಿ ಇಬ್ಬನಿ ತಲೆಮೇಲೆ ಬೀಳದಂತೆ ಜನತೆ ಟೊಪ್ಪಿ ಅಥವಾ ಟವೆಲ್ ಸುತ್ತಿಕೊಂಡು ದೈನಂದಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಮಂಜು ಕೆಲ ಬೆಳೆಗಳಿಗೆ ವರದಾನವಾದರೆ ಅನೇಕ ಬೆಳೆಗಳ ರೋಗರುಜಿನಕ್ಕೂ ಕಾರಣವಾಗಲಿದೆ ಎನ್ನುತ್ತಾರೆ ಕೃಷಿ ತಜ್ಞರು. ಹಸಿಕಡಲೆ, ಕೊತ್ತಂಬರಿ ಬೆಳೆಗಳು ಇಬ್ಬನಿ-ಚಳಿ ವಾತಾವರಣದಲ್ಲೇ ಬೆಳೆಯುತ್ತವೆ. ತರಕಾರಿ ಇನ್ನಿತರ ಬೆಳೆಗಳು ವಿಶೇಷವಾಗಿ ಕುಂಬಳ ಜಾತಿಯ ಬಳ್ಳಿ ಸಸ್ಯಗಳಲ್ಲಿ ಇಬ್ಬನಿಯಿಂದ ಬೂದು ರೋಗ ತಲೆ ಎತ್ತುವ ಅಪಾಯವಿದೆ ಎಂಬುದು ತಜ್ಞರ ಅನಿಸಿಕೆ.

ಇಬ್ಬನಿ ಪ್ರಾರಂಭವಾಯಿತೆಂದರೆ ಮಳೆಗೆ ಬ್ರೇಕ್ ಬಿದ್ದಂತೆ ಎಂಬುದು ರೈತರ ಕೃಷಿ ಲೆಕ್ಕಾಚಾರ. ಕ್ಯಾಲೆಂಡರ್ ಪ್ರಕಾರ, ಇನ್ನೂ ಚಳಿಗಾಲ ಶುರುವಾಗಿಲ್ಲ. ಆದರೂ ಥಂಡಿ ವಾತಾವರಣ ಈಗಲೇ ಚಿಗುರೊಡೆದಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕನಿಷ್ಠ ೧೭.೦೨ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರ ಹಿಂದಿನ ೨೪ಗಂಟೆ ಅವಧಿಯಲ್ಲಿ ಕನಿಷ್ಠ ೧೬.೦೭ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ. -ಹೆಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.

andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

2 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

3 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

3 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

4 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

5 hours ago