ಜಿಲ್ಲೆಗಳು

ಚಾಮರಾಜನಗರ ಜಿಲ್ಲೆಯಲ್ಲಿ ಮಂಜಿನಮಳೆ!

ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ದಟ್ಟ ಮಂಜಿನ ಮಳೆಯ ಸುರಿದಿದ್ದು ಬೆಳಿಗ್ಗೆ ೮.೩೦ರವರೆಗೂ ಮಂಜು ಕವಿದಿತ್ತು. ಇದರೊಂದಿಗೆ ಚಳಿಯೂ ಶುರುವಾಗಿದೆ.

ಕೆಲದಿನಗಳಿಂದಲೇ ಇಬ್ಬನಿ ಬೀಳುತ್ತಿದೆಯಾದರೂ ಬುಧವಾರದ ಮಟ್ಟಿಗೆ ಮಂಜು ಸುರಿದಿರಲಿಲ್ಲ. ಪ್ರಖರ ಬಿಸಿಲು ಠಳಾಯಿಸುವವರೆಗೂ ಮಂಜಿನ ಕಾರಣದಿಂದಾಗಿ ವಾಹನಗಳು ಲೈಟ್ ಹಾಕಿಕೊಂಡೇ ಸಂಚರಿಸಬೇಕಾಯಿತು.

ವಾಯುವಿಹಾರ ಮಾಡುವವರು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆಜ್ಜೆ ಹಾಕಬೇಕಾಯಿತು. ಇಬ್ಬನಿ ಹಿನ್ನೆಲೆಯಲ್ಲಿ ರಸ್ತೆಬದಿಯಲ್ಲಿ ವಾಕಿಂಗ್ ಮಾಡುವವರು ಎಚ್ಚರಿಕೆ ವಹಿಸಬೇಕಿದೆ. ಮಂಜು ಕವಿದಾಗ ತೀರಾ ಸನಿಹಕ್ಕೆ ಬರುವವರೆಗೂ ಮುಂದೆ ಏನಿದೆ ಎಂಬುದೇ ಗೊತ್ತಾಗುವುದಿಲ್ಲ. ಹೀಗಾಗಿ ಹಿಮದ ಈ ಸಂದರ್ಭ ರಸ್ತೆಬದಿಯಲ್ಲಿ ವಾಯುವಿಹಾರ ಮಾಡದಿರುವುದೇ ಸೂಕ್ತ.

ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗಿ ಕೆರೆಕಟ್ಟೆ ಹಾಗೂ ಜಲಾಶಯಗಳು ಭರ್ತಿ ಕಂಡಿರುವುದರಿಂದ ಇತರೆಡೆಗಿಂತ ಈ ನೀರಿನ ಪ್ರದೇಶಗಳಲ್ಲಿ ಇಬ್ಬನಿ ತುಸು ಹೆಚ್ಚಾಗಿಯೇ ಬೀಳತೊಡಗಿದೆ. ಆದ ಕಾರಣ ನೀರು ಹರಿದಾಡುವ ಭಾಗಗಳಲ್ಲಿನ ಜನರು ಅದಾಗಲೇ ಬೆಚ್ಚನೆಯ ಉಡುಪುಗಳ ಮೊರೆ ಹೋಗುವಂತಾಗಿದೆ.
ಆರೋಗ್ಯದ ಮೇಲೂ ಇಬ್ಬನಿ ಗಂಭೀರ ಪರಿಣಾಮ ಬೀರುತ್ತದೆ. ತಲೆನೋವು, ನೆಗಡಿ ಹಾಗೂ ಜ್ವರಕ್ಕೂ ಕಾರಣವಾಗಲಿದೆ. ಈ ಹಿನ್ನೆಲೆಯಲ್ಲಿ ಇಬ್ಬನಿ ತಲೆಮೇಲೆ ಬೀಳದಂತೆ ಜನತೆ ಟೊಪ್ಪಿ ಅಥವಾ ಟವೆಲ್ ಸುತ್ತಿಕೊಂಡು ದೈನಂದಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಮಂಜು ಕೆಲ ಬೆಳೆಗಳಿಗೆ ವರದಾನವಾದರೆ ಅನೇಕ ಬೆಳೆಗಳ ರೋಗರುಜಿನಕ್ಕೂ ಕಾರಣವಾಗಲಿದೆ ಎನ್ನುತ್ತಾರೆ ಕೃಷಿ ತಜ್ಞರು. ಹಸಿಕಡಲೆ, ಕೊತ್ತಂಬರಿ ಬೆಳೆಗಳು ಇಬ್ಬನಿ-ಚಳಿ ವಾತಾವರಣದಲ್ಲೇ ಬೆಳೆಯುತ್ತವೆ. ತರಕಾರಿ ಇನ್ನಿತರ ಬೆಳೆಗಳು ವಿಶೇಷವಾಗಿ ಕುಂಬಳ ಜಾತಿಯ ಬಳ್ಳಿ ಸಸ್ಯಗಳಲ್ಲಿ ಇಬ್ಬನಿಯಿಂದ ಬೂದು ರೋಗ ತಲೆ ಎತ್ತುವ ಅಪಾಯವಿದೆ ಎಂಬುದು ತಜ್ಞರ ಅನಿಸಿಕೆ.

ಇಬ್ಬನಿ ಪ್ರಾರಂಭವಾಯಿತೆಂದರೆ ಮಳೆಗೆ ಬ್ರೇಕ್ ಬಿದ್ದಂತೆ ಎಂಬುದು ರೈತರ ಕೃಷಿ ಲೆಕ್ಕಾಚಾರ. ಕ್ಯಾಲೆಂಡರ್ ಪ್ರಕಾರ, ಇನ್ನೂ ಚಳಿಗಾಲ ಶುರುವಾಗಿಲ್ಲ. ಆದರೂ ಥಂಡಿ ವಾತಾವರಣ ಈಗಲೇ ಚಿಗುರೊಡೆದಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕನಿಷ್ಠ ೧೭.೦೨ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದರ ಹಿಂದಿನ ೨೪ಗಂಟೆ ಅವಧಿಯಲ್ಲಿ ಕನಿಷ್ಠ ೧೬.೦೭ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ. -ಹೆಚ್.ಕೆ.ರಜತ್, ಕೃಷಿ ಹವಾಮಾನ ತಜ್ಞ.

andolana

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

1 hour ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

2 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

2 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

2 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

3 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

3 hours ago