ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ.
ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯುತ್ತಿರುವ ಮಕ್ಕಳು: ಭಾರಿ ಮಳೆಯಾದ ಪರಿಣಾಮ ಅಪರೂಪಕ್ಕೆ ಒಮ್ಮೆಯಂತೆ ಹಾಲ್ಕೆರೆ ಕೋಡಿ ಬಿದ್ದ ನೀರಿನಲ್ಲಿ ಬರುತ್ತಿರುವ ಮೀನುಗಳನ್ನು ಮಕ್ಕಳು ಹಿಡಿಯುವಲ್ಲಿ ಉತ್ಸುಕರಾಗಿರುವುದು ಕಂಡು ಬಂದಿತು. ನೀರಿನ ಮೂಲಕ ಹಾವುಗಳ ಕೂಡ ಪ್ರತ್ಯಕ್ಷವಾಗಿರುವುದು ಕಂಡು ಬಂದಿದೆ.
ಗ್ರಾ.ಪಂ. ತುರ್ತು ಕಾರ್ಯ: ಕೆರೆ ನೀರು ಕೋಡಿ ಬಿದ್ದ ಹಿನ್ನೆಲೆಯಲ್ಲಿ ನೀರು ಗ್ರಾಮದ ಒಳಗಡೆ ಹೋಗುತ್ತಿರುವುದನ್ನು ಮನಗಂಡು ಗ್ರಾಮ ಪಂಚಾಯಿತಿ ವತಿಯಿಂದ ಕೆರೆಯ ನೀರಿನ ಮೂಲವಾದ ತಾತ್ಕಾಲಿಕವಾಗಿ ಕಾಲುವೆಯನ್ನು ಮುಚ್ಚಿಸುವ ಮೂಲಕ ಕೋಡಿ ಬಿದ್ದ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.
40 ವರ್ಷಗಳ ಬಳಿಕ ಕೋಡಿ ಬಿದ್ದ ಕೆರೆ: ಶಾಸಕ ಆರ್. ನರೇಂದ್ರ ಅವರ ಸ್ವಗ್ರಾಮದ ಕೆರೆ ಕಳೆದ 40 ವರ್ಷಗಳಿಂದ ತುಂಬಿ ಕೋಡಿ ಬಿದ್ದಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿ ಕೆರೆ ತುಂಬಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…