ಜಿಲ್ಲೆಗಳು

ಹನೂರು : ಮಳೆಯಿಂದಾಗಿ ಅಂಗನವಾಡಿ ಜಲಾವೃತ, ಆಹಾರ ಪದಾರ್ಥ ನೀರು ಪಾಲು

ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ.

ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯುತ್ತಿರುವ ಮಕ್ಕಳು: ಭಾರಿ ಮಳೆಯಾದ ಪರಿಣಾಮ ಅಪರೂಪಕ್ಕೆ ಒಮ್ಮೆಯಂತೆ ಹಾಲ್ಕೆರೆ ಕೋಡಿ ಬಿದ್ದ ನೀರಿನಲ್ಲಿ ಬರುತ್ತಿರುವ ಮೀನುಗಳನ್ನು ಮಕ್ಕಳು ಹಿಡಿಯುವಲ್ಲಿ ಉತ್ಸುಕರಾಗಿರುವುದು ಕಂಡು ಬಂದಿತು. ನೀರಿನ ಮೂಲಕ ಹಾವುಗಳ ಕೂಡ ಪ್ರತ್ಯಕ್ಷವಾಗಿರುವುದು ಕಂಡು ಬಂದಿದೆ.

ಗ್ರಾ.ಪಂ. ತುರ್ತು ಕಾರ್ಯ: ಕೆರೆ ನೀರು ಕೋಡಿ ಬಿದ್ದ ಹಿನ್ನೆಲೆಯಲ್ಲಿ ನೀರು ಗ್ರಾಮದ ಒಳಗಡೆ ಹೋಗುತ್ತಿರುವುದನ್ನು ಮನಗಂಡು ಗ್ರಾಮ ಪಂಚಾಯಿತಿ ವತಿಯಿಂದ ಕೆರೆಯ ನೀರಿನ ಮೂಲವಾದ ತಾತ್ಕಾಲಿಕವಾಗಿ ಕಾಲುವೆಯನ್ನು ಮುಚ್ಚಿಸುವ ಮೂಲಕ ಕೋಡಿ ಬಿದ್ದ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.

40 ವರ್ಷಗಳ ಬಳಿಕ ಕೋಡಿ ಬಿದ್ದ ಕೆರೆ: ಶಾಸಕ ಆರ್. ನರೇಂದ್ರ ಅವರ ಸ್ವಗ್ರಾಮದ ಕೆರೆ ಕಳೆದ 40 ವರ್ಷಗಳಿಂದ ತುಂಬಿ ಕೋಡಿ ಬಿದ್ದಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿ ಕೆರೆ ತುಂಬಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 mins ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

1 hour ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

2 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

2 hours ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

2 hours ago