ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ.
ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯುತ್ತಿರುವ ಮಕ್ಕಳು: ಭಾರಿ ಮಳೆಯಾದ ಪರಿಣಾಮ ಅಪರೂಪಕ್ಕೆ ಒಮ್ಮೆಯಂತೆ ಹಾಲ್ಕೆರೆ ಕೋಡಿ ಬಿದ್ದ ನೀರಿನಲ್ಲಿ ಬರುತ್ತಿರುವ ಮೀನುಗಳನ್ನು ಮಕ್ಕಳು ಹಿಡಿಯುವಲ್ಲಿ ಉತ್ಸುಕರಾಗಿರುವುದು ಕಂಡು ಬಂದಿತು. ನೀರಿನ ಮೂಲಕ ಹಾವುಗಳ ಕೂಡ ಪ್ರತ್ಯಕ್ಷವಾಗಿರುವುದು ಕಂಡು ಬಂದಿದೆ.
ಗ್ರಾ.ಪಂ. ತುರ್ತು ಕಾರ್ಯ: ಕೆರೆ ನೀರು ಕೋಡಿ ಬಿದ್ದ ಹಿನ್ನೆಲೆಯಲ್ಲಿ ನೀರು ಗ್ರಾಮದ ಒಳಗಡೆ ಹೋಗುತ್ತಿರುವುದನ್ನು ಮನಗಂಡು ಗ್ರಾಮ ಪಂಚಾಯಿತಿ ವತಿಯಿಂದ ಕೆರೆಯ ನೀರಿನ ಮೂಲವಾದ ತಾತ್ಕಾಲಿಕವಾಗಿ ಕಾಲುವೆಯನ್ನು ಮುಚ್ಚಿಸುವ ಮೂಲಕ ಕೋಡಿ ಬಿದ್ದ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.
40 ವರ್ಷಗಳ ಬಳಿಕ ಕೋಡಿ ಬಿದ್ದ ಕೆರೆ: ಶಾಸಕ ಆರ್. ನರೇಂದ್ರ ಅವರ ಸ್ವಗ್ರಾಮದ ಕೆರೆ ಕಳೆದ 40 ವರ್ಷಗಳಿಂದ ತುಂಬಿ ಕೋಡಿ ಬಿದ್ದಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿ ಕೆರೆ ತುಂಬಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…