ಹನೂರು: ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಮಠದ ಬಳಿಯ ಹಾಲ್ಕೆರೆ ಕೋಡಿ ಬಿದ್ದು ಅಂಗನವಾಡಿ ಎರಡನೇ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳು ನೀರು ಪಾಲಾಗಿದೆ.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿಯವರು ಅಂಗನವಾಡಿ ಒಳಗೆ ತುಂಬಿದ ನೀರನ್ನು ತೆರವುಗೊಳಿಸುತ್ತಿದ್ದಾರೆ.
ಕೋಡಿ ಬಿದ್ದ ನೀರಿನಲ್ಲಿ ಮೀನು ಹಿಡಿಯುತ್ತಿರುವ ಮಕ್ಕಳು: ಭಾರಿ ಮಳೆಯಾದ ಪರಿಣಾಮ ಅಪರೂಪಕ್ಕೆ ಒಮ್ಮೆಯಂತೆ ಹಾಲ್ಕೆರೆ ಕೋಡಿ ಬಿದ್ದ ನೀರಿನಲ್ಲಿ ಬರುತ್ತಿರುವ ಮೀನುಗಳನ್ನು ಮಕ್ಕಳು ಹಿಡಿಯುವಲ್ಲಿ ಉತ್ಸುಕರಾಗಿರುವುದು ಕಂಡು ಬಂದಿತು. ನೀರಿನ ಮೂಲಕ ಹಾವುಗಳ ಕೂಡ ಪ್ರತ್ಯಕ್ಷವಾಗಿರುವುದು ಕಂಡು ಬಂದಿದೆ.
ಗ್ರಾ.ಪಂ. ತುರ್ತು ಕಾರ್ಯ: ಕೆರೆ ನೀರು ಕೋಡಿ ಬಿದ್ದ ಹಿನ್ನೆಲೆಯಲ್ಲಿ ನೀರು ಗ್ರಾಮದ ಒಳಗಡೆ ಹೋಗುತ್ತಿರುವುದನ್ನು ಮನಗಂಡು ಗ್ರಾಮ ಪಂಚಾಯಿತಿ ವತಿಯಿಂದ ಕೆರೆಯ ನೀರಿನ ಮೂಲವಾದ ತಾತ್ಕಾಲಿಕವಾಗಿ ಕಾಲುವೆಯನ್ನು ಮುಚ್ಚಿಸುವ ಮೂಲಕ ಕೋಡಿ ಬಿದ್ದ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ.
40 ವರ್ಷಗಳ ಬಳಿಕ ಕೋಡಿ ಬಿದ್ದ ಕೆರೆ: ಶಾಸಕ ಆರ್. ನರೇಂದ್ರ ಅವರ ಸ್ವಗ್ರಾಮದ ಕೆರೆ ಕಳೆದ 40 ವರ್ಷಗಳಿಂದ ತುಂಬಿ ಕೋಡಿ ಬಿದ್ದಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿ ಕೆರೆ ತುಂಬಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…