ಜಿಲ್ಲೆಗಳು

ಮಳೆ, ಮೋಡದ ಹೊಡೆತಕ್ಕೆ ಸೊರಗಿದ ಬಹುರೂಪಿ

ಇನ್ನು ಮೂರು ದಿನಗಳು ಬಾಕಿಯಿರುವಾಗಲೇ ಕರಕುಶಲ ಮೇಳದ ಮಳಿಗೆಗಳು ಖಾಲಿ

ಮೈಸೂರು: ರಂಗಾಯಣದ ಮಹತ್ವಾಕಾಂಕ್ಷಿ ಉತ್ಸವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಈ ಬಾರಿ ಮಳೆ ಆರಂಭಿಕ ಹೊಡತೆ ಕೊಟ್ಟಿದೆ. ಚೆನ್ನೈನಲ್ಲಿ ಎದ್ದಿರುವ ಸೈಕ್ಲೋನ್ ಕಾರಣ ನಗರದಲ್ಲಿ ಮೂರು ದಿನಗಳಿಂದಲೂ ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ ಇದೆ. ಇದರಿಂದ ಹೆಚ್ಚಿನ ಕಲಾಸಕ್ತರು ರಂಗಾಯಣದ ಕಡೆಗೆ ಮುಖ ಮಾಡುತ್ತಿಲ್ಲ. ಇದರ ಜೊತೆಗೆ ಆಯೋಜಕರ ಅಸಹಕಾರದಿಂದ ಕರಕುಶಲ ಮೇಳದಲ್ಲಿ ಮಳಿಗೆಗಳನ್ನು ಹಾಕಿದ್ದವರು ಮಳಿಗೆಯನ್ನು ಖಾಲಿ ಮಾಡಿ ಹೊರಟಿರುವುದರಿಂದ ರಂಗಾಯಣದ ಅಂಗಳ ಭಣಗುಡುತ್ತಿದೆ.

ಡಿ.೯ರಂದು ಸಂಜೆ ಬಹುರೂಪಿ ಕರಕುಶಲ ಮೇಳಕ್ಕೆ ಚಾಲನೆ ದೊರೆಯಿತು. ಹೀಗೆ ಆಂಭಗೊಂಡ ಕೆಲವೇ ಸಮಯದಲ್ಲಿ ಬಂದ ಮಳೆಯಿಂದಾಗಿ, ಅಂದೇ ಕೆಲವು ವ್ಯಾಪಾರಿಗಳು ಆಯೋಜಕರ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಮಳಿಗೆಗಳಿಗಾಗಿ ತಾವು ಕಟ್ಟಿದ್ದ ಡಿಡಿ ಹಣವನ್ನು ಹಿಂಪಡೆದು ತಮ್ಮ ವಸ್ತುಗಳನ್ನು ತೆಗೆದುಕೊಂಡು ವಾಪಸ್ಸಾದರು.

ಈ ವೇಳೆ ಆಯೋಜಕರು ನಾಳೆಗೆ ಈ ರೀತಿ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ನಾಲ್ಕು ದಿನಗಳು ಕಳೆದರೂ ಇನ್ನೂ ಸಮರ್ಪಕ ವ್ಯವಸ್ಥೆ ಕಲ್ಪಿಸದ ಕಾರಣ ಭಾನುವಾರವೂ ಹಲವು ಮಳಿಗೆಗಳವರು ತಮ್ಮ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ರಂಗಾಯಣದ ಆವರಣದಲ್ಲಿ ಕಂಡು ಬಂದವು.

ವ್ಯಾಪಾರಿಗಳ ಅಳಲು

‘ಡಿಡಿ ಹಣವನ್ನು ಕಟ್ಟಿಸಿಕೊಳ್ಳುವಾಗ ವ್ಯವಸ್ಥಿತವಾಗಿ ಆಯೋಜನೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ, ಹೇಳಿದಂತೆ ಏನೂ ಮಾಡಿಲ್ಲ. ನಾಲ್ಕು ದಿನಗಳಾಯ್ತು ಏನೂ ವ್ಯವಸ್ಥೆ ಮಾಡಲಿಲ್ಲ. ಬಟ್ಟೆ, ಪುಸ್ತಕಗಳು ಎಲ್ಲವೂ ಒದ್ದೆಯಾಗುತ್ತಿವೆ. ಮಳೆಯಿಂದ ಜನರೂ ಬಾರದೇ ವ್ಯಾಪಾರವಿಲ್ಲ. ಹಾಗಾಗಿ, ವಾಪಸ್ಸು ಹೋಗುತ್ತಿದ್ದೇವೆ. ಡಿಡಿ ಹಣವನ್ನು ಕೇಳಿದರೆ, ಎರಡು ದಿನಗಳ ಬಾಡಿಗೆ ಮುರಿದುಕೊಂಡು ಕೊಡುತ್ತೇವೆ ಎಂದು ಹೇಳುತ್ತಾರೆ. ನಮ್ಮ ವಸ್ತುಗಳನ್ನು ತರಲು ನೀಡಿರುವ ಟ್ರಾನ್ಸ್‌ಪೋರ್ಟ್ ಹಣವೂ ಇಲ್ಲಿ ಸಂಪಾದನೆಯಾಗಿಲ್ಲ ಎಂದು ಕರಕುಶಲ ಮೇಳದಲ್ಲಿನ ವ್ಯಾಪಾರಿಗಳು ಅಳಲು ತೋಡಿಕೊಂಡರು.


ಭಣಗುಡುತ್ತಿದೆ ರಂಗಾಯಣ

ತನ್ನದೇ ಆದ ಇತಿಹಾಸ ಮತ್ತು ಮಹತ್ವವನ್ನು ಹೊಂದಿರುವ ಬಹುರೂಪಿ ನಾಟಕೋತ್ಸವಕ್ಕೆ ಪ್ರತಿವರ್ಷವೂ ಅಸಂಖ್ಯಾತ ಕಲಾಸಕ್ತರು ಮತ್ತು ಪ್ರೇಕ್ಷಕ ವರ್ಗ, ಕಲಾವಿದರು ರಾಜ್ಯ ಮತ್ತು ಹೊರ ರಾಜ್ಯಗಳಿಂದ ಬರುತ್ತಿದ್ದರು. ಆದರೆ, ಈ ಬಾರಿ ಸಾಕಷ್ಟು ಜನರು ಕಾಣದೆ ರಂಗಾಯಣದ ಅಂಗಳ ಭಣಗುಡುತ್ತಿದೆ. ಇದಕ್ಕೆ, ಮಳೆ ಮುಖ್ಯ ಕಾರಣ. ಇದರ ಜೊತೆಗೆ ಅಸಮರ್ಪಕ ಆಯೋಜನೆಯೂ ಕಾರಣ ಎನ್ನಬಹುದು. ಅಲ್ಲದೇ, ಬಹುರೂಪಿ ಆರಂಭವಾಗಿ ನಾಲ್ಕು ದಿನಗಳಾದರೂ, ಇನ್ನು ಸಿದ್ಧತೆ ಪೂರ್ಣಗೊಳ್ಳದೆ ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇವೆ.

ಕೆಲವೊಂದು ನಾಟಕಗಳಿಗಷ್ಟೆ ಜನರು: ಕನ್ನಡ ಮತ್ತು ಕೆಲವು ಭಾಷೆಯ ನಾಟಕಗಳಲ್ಲಷ್ಟೇ ಜನರು ಕಂಡು ಬರುತ್ತಿದ್ದು, ಚಲನಚಿತ್ರೋತ್ಸವ ಮತ್ತು ಜನಪದೋತ್ಸವದಲ್ಲಿ ಹೆಚ್ಚಿನ ಪ್ರೇಕ್ಷಕರು ಕಂಡು ಬರುತ್ತಿಲ್ಲ.


‘ಎರಡು ದಿನಗಳ ಬಾಡಿಗೆ ಮುರಿದುಕೊಂಡು ಡಿಡಿ ಹಣವನ್ನು ನೀಡುವ ಕುರಿತು ರಂಗಾಯಣದ ನಿರ್ದೇಶಕರೊಂದಿಗೆ ಮಾತನಾಡುತ್ತೇನೆ’

-ನಿರ್ಮಲ ಮಠಪತಿ, ಉಪ ನಿರ್ದೇಶಕರು, ರಂಗಾಯಣ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago