ಜಿಲ್ಲೆಗಳು

ಮಳೆ, ಮೋಡದ ಹೊಡೆತಕ್ಕೆ ಸೊರಗಿದ ಬಹುರೂಪಿ

ಇನ್ನು ಮೂರು ದಿನಗಳು ಬಾಕಿಯಿರುವಾಗಲೇ ಕರಕುಶಲ ಮೇಳದ ಮಳಿಗೆಗಳು ಖಾಲಿ

ಮೈಸೂರು: ರಂಗಾಯಣದ ಮಹತ್ವಾಕಾಂಕ್ಷಿ ಉತ್ಸವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಈ ಬಾರಿ ಮಳೆ ಆರಂಭಿಕ ಹೊಡತೆ ಕೊಟ್ಟಿದೆ. ಚೆನ್ನೈನಲ್ಲಿ ಎದ್ದಿರುವ ಸೈಕ್ಲೋನ್ ಕಾರಣ ನಗರದಲ್ಲಿ ಮೂರು ದಿನಗಳಿಂದಲೂ ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ ಇದೆ. ಇದರಿಂದ ಹೆಚ್ಚಿನ ಕಲಾಸಕ್ತರು ರಂಗಾಯಣದ ಕಡೆಗೆ ಮುಖ ಮಾಡುತ್ತಿಲ್ಲ. ಇದರ ಜೊತೆಗೆ ಆಯೋಜಕರ ಅಸಹಕಾರದಿಂದ ಕರಕುಶಲ ಮೇಳದಲ್ಲಿ ಮಳಿಗೆಗಳನ್ನು ಹಾಕಿದ್ದವರು ಮಳಿಗೆಯನ್ನು ಖಾಲಿ ಮಾಡಿ ಹೊರಟಿರುವುದರಿಂದ ರಂಗಾಯಣದ ಅಂಗಳ ಭಣಗುಡುತ್ತಿದೆ.

ಡಿ.೯ರಂದು ಸಂಜೆ ಬಹುರೂಪಿ ಕರಕುಶಲ ಮೇಳಕ್ಕೆ ಚಾಲನೆ ದೊರೆಯಿತು. ಹೀಗೆ ಆಂಭಗೊಂಡ ಕೆಲವೇ ಸಮಯದಲ್ಲಿ ಬಂದ ಮಳೆಯಿಂದಾಗಿ, ಅಂದೇ ಕೆಲವು ವ್ಯಾಪಾರಿಗಳು ಆಯೋಜಕರ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಮಳಿಗೆಗಳಿಗಾಗಿ ತಾವು ಕಟ್ಟಿದ್ದ ಡಿಡಿ ಹಣವನ್ನು ಹಿಂಪಡೆದು ತಮ್ಮ ವಸ್ತುಗಳನ್ನು ತೆಗೆದುಕೊಂಡು ವಾಪಸ್ಸಾದರು.

ಈ ವೇಳೆ ಆಯೋಜಕರು ನಾಳೆಗೆ ಈ ರೀತಿ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ನಾಲ್ಕು ದಿನಗಳು ಕಳೆದರೂ ಇನ್ನೂ ಸಮರ್ಪಕ ವ್ಯವಸ್ಥೆ ಕಲ್ಪಿಸದ ಕಾರಣ ಭಾನುವಾರವೂ ಹಲವು ಮಳಿಗೆಗಳವರು ತಮ್ಮ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ರಂಗಾಯಣದ ಆವರಣದಲ್ಲಿ ಕಂಡು ಬಂದವು.

ವ್ಯಾಪಾರಿಗಳ ಅಳಲು

‘ಡಿಡಿ ಹಣವನ್ನು ಕಟ್ಟಿಸಿಕೊಳ್ಳುವಾಗ ವ್ಯವಸ್ಥಿತವಾಗಿ ಆಯೋಜನೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ, ಹೇಳಿದಂತೆ ಏನೂ ಮಾಡಿಲ್ಲ. ನಾಲ್ಕು ದಿನಗಳಾಯ್ತು ಏನೂ ವ್ಯವಸ್ಥೆ ಮಾಡಲಿಲ್ಲ. ಬಟ್ಟೆ, ಪುಸ್ತಕಗಳು ಎಲ್ಲವೂ ಒದ್ದೆಯಾಗುತ್ತಿವೆ. ಮಳೆಯಿಂದ ಜನರೂ ಬಾರದೇ ವ್ಯಾಪಾರವಿಲ್ಲ. ಹಾಗಾಗಿ, ವಾಪಸ್ಸು ಹೋಗುತ್ತಿದ್ದೇವೆ. ಡಿಡಿ ಹಣವನ್ನು ಕೇಳಿದರೆ, ಎರಡು ದಿನಗಳ ಬಾಡಿಗೆ ಮುರಿದುಕೊಂಡು ಕೊಡುತ್ತೇವೆ ಎಂದು ಹೇಳುತ್ತಾರೆ. ನಮ್ಮ ವಸ್ತುಗಳನ್ನು ತರಲು ನೀಡಿರುವ ಟ್ರಾನ್ಸ್‌ಪೋರ್ಟ್ ಹಣವೂ ಇಲ್ಲಿ ಸಂಪಾದನೆಯಾಗಿಲ್ಲ ಎಂದು ಕರಕುಶಲ ಮೇಳದಲ್ಲಿನ ವ್ಯಾಪಾರಿಗಳು ಅಳಲು ತೋಡಿಕೊಂಡರು.


ಭಣಗುಡುತ್ತಿದೆ ರಂಗಾಯಣ

ತನ್ನದೇ ಆದ ಇತಿಹಾಸ ಮತ್ತು ಮಹತ್ವವನ್ನು ಹೊಂದಿರುವ ಬಹುರೂಪಿ ನಾಟಕೋತ್ಸವಕ್ಕೆ ಪ್ರತಿವರ್ಷವೂ ಅಸಂಖ್ಯಾತ ಕಲಾಸಕ್ತರು ಮತ್ತು ಪ್ರೇಕ್ಷಕ ವರ್ಗ, ಕಲಾವಿದರು ರಾಜ್ಯ ಮತ್ತು ಹೊರ ರಾಜ್ಯಗಳಿಂದ ಬರುತ್ತಿದ್ದರು. ಆದರೆ, ಈ ಬಾರಿ ಸಾಕಷ್ಟು ಜನರು ಕಾಣದೆ ರಂಗಾಯಣದ ಅಂಗಳ ಭಣಗುಡುತ್ತಿದೆ. ಇದಕ್ಕೆ, ಮಳೆ ಮುಖ್ಯ ಕಾರಣ. ಇದರ ಜೊತೆಗೆ ಅಸಮರ್ಪಕ ಆಯೋಜನೆಯೂ ಕಾರಣ ಎನ್ನಬಹುದು. ಅಲ್ಲದೇ, ಬಹುರೂಪಿ ಆರಂಭವಾಗಿ ನಾಲ್ಕು ದಿನಗಳಾದರೂ, ಇನ್ನು ಸಿದ್ಧತೆ ಪೂರ್ಣಗೊಳ್ಳದೆ ಸಣ್ಣಪುಟ್ಟ ಕೆಲಸಗಳು ನಡೆಯುತ್ತಲೇ ಇವೆ.

ಕೆಲವೊಂದು ನಾಟಕಗಳಿಗಷ್ಟೆ ಜನರು: ಕನ್ನಡ ಮತ್ತು ಕೆಲವು ಭಾಷೆಯ ನಾಟಕಗಳಲ್ಲಷ್ಟೇ ಜನರು ಕಂಡು ಬರುತ್ತಿದ್ದು, ಚಲನಚಿತ್ರೋತ್ಸವ ಮತ್ತು ಜನಪದೋತ್ಸವದಲ್ಲಿ ಹೆಚ್ಚಿನ ಪ್ರೇಕ್ಷಕರು ಕಂಡು ಬರುತ್ತಿಲ್ಲ.


‘ಎರಡು ದಿನಗಳ ಬಾಡಿಗೆ ಮುರಿದುಕೊಂಡು ಡಿಡಿ ಹಣವನ್ನು ನೀಡುವ ಕುರಿತು ರಂಗಾಯಣದ ನಿರ್ದೇಶಕರೊಂದಿಗೆ ಮಾತನಾಡುತ್ತೇನೆ’

-ನಿರ್ಮಲ ಮಠಪತಿ, ಉಪ ನಿರ್ದೇಶಕರು, ರಂಗಾಯಣ

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

9 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

13 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

14 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

19 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

19 hours ago