ಹನೂರು: ಕಳೆದ 1ವಾರದಿಂದ ಸುರಿದ ಭಾರಿ ಮಳೆಗೆ ರೈತರು ಒಬ್ಬರ ಜಮೀನಿನಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಚಕೊಳೆತು ನಷ್ಟವಾಗಿರುವ ಘಟನೆ ತಾಲೂಕಿನ ಬಂಡಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ತಾಲ್ಲೂಕಿನ ಬಂಡಳ್ಳಿ ಗ್ರಾಮದ ಮಾದೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ 5 ಎಕರೆಗೆ ಈರುಳ್ಳಿ ಬೆಳೆ ಹಾಕಲಾಗಿತ್ತು. ನಿರಂತರ ಮಳೆಯಿಂದ ಜಮೀನಿನಲ್ಲಿ ನೀರು ತುಂಬಿ ಈರುಳ್ಳಿ ಬೆಳೆ ಕೊಳೆತಿರುವುದರಿಂದ ರೈತ ಕಂಗಾಲಾಗಿದ್ದಾನೆ.
ಗಾಯದ ಮೇಲೆ ಬರೆ: ಮಾರುಕಟ್ಟೆಯಲ್ಲಿ ಈರುಳ್ಳಿಗೆ ಉತ್ತಮ ಬೆಲೆ ಇಲ್ಲದೆ ಇರುವ ದುಸ್ಥಿತಿಯಲ್ಲಿ ಮಳೆಯಿಂದ ಈರುಳ್ಳಿ ಕೊಳೆಯುತ್ತಿರುವುದರಿಂದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈ ಬಗ್ಗೆ ನೊಂದ ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ನಾವು ಈರುಳ್ಳಿ ಬೆಳೆಯನ್ನು ಬೆಳೆದಿದ್ದವು, ಇನ್ನೇನೋ ಈರುಳ್ಳಿ ಬೆಳೆಯನ್ನು ತೆಗೆದು ಮಾರಾಟ ಮಾಡುವಷ್ಟರಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಲಕ್ಷಾಂತರ ರೂ. ಈರುಳ್ಳಿ ಬೆಳೆ ನಷ್ಟ ಉಂಟಾಗಿದ್ದು ದಿಕ್ಕುತೋಚದಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ…
ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್ನವರ ಕಸರತ್ತು ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ…