ಹನೂರು: ಕಳೆದ 1ವಾರದಿಂದ ಸುರಿದ ಭಾರಿ ಮಳೆಗೆ ರೈತರು ಒಬ್ಬರ ಜಮೀನಿನಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಚಕೊಳೆತು ನಷ್ಟವಾಗಿರುವ ಘಟನೆ ತಾಲೂಕಿನ ಬಂಡಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ತಾಲ್ಲೂಕಿನ ಬಂಡಳ್ಳಿ ಗ್ರಾಮದ ಮಾದೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ 5 ಎಕರೆಗೆ ಈರುಳ್ಳಿ ಬೆಳೆ ಹಾಕಲಾಗಿತ್ತು. ನಿರಂತರ ಮಳೆಯಿಂದ ಜಮೀನಿನಲ್ಲಿ ನೀರು ತುಂಬಿ ಈರುಳ್ಳಿ ಬೆಳೆ ಕೊಳೆತಿರುವುದರಿಂದ ರೈತ ಕಂಗಾಲಾಗಿದ್ದಾನೆ.
ಗಾಯದ ಮೇಲೆ ಬರೆ: ಮಾರುಕಟ್ಟೆಯಲ್ಲಿ ಈರುಳ್ಳಿಗೆ ಉತ್ತಮ ಬೆಲೆ ಇಲ್ಲದೆ ಇರುವ ದುಸ್ಥಿತಿಯಲ್ಲಿ ಮಳೆಯಿಂದ ಈರುಳ್ಳಿ ಕೊಳೆಯುತ್ತಿರುವುದರಿಂದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈ ಬಗ್ಗೆ ನೊಂದ ರೈತ ಮಹೇಶ್ ಮಾತನಾಡಿ, ಸಾಲ ಮಾಡಿ ನಾವು ಈರುಳ್ಳಿ ಬೆಳೆಯನ್ನು ಬೆಳೆದಿದ್ದವು, ಇನ್ನೇನೋ ಈರುಳ್ಳಿ ಬೆಳೆಯನ್ನು ತೆಗೆದು ಮಾರಾಟ ಮಾಡುವಷ್ಟರಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಲಕ್ಷಾಂತರ ರೂ. ಈರುಳ್ಳಿ ಬೆಳೆ ನಷ್ಟ ಉಂಟಾಗಿದ್ದು ದಿಕ್ಕುತೋಚದಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಸೂಕ್ತ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…