ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.
ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು.
ಜಲಾವೃತ ಮನೆಗಳಿಂದ ವಯೋವೃದ್ದರನ್ನು ಸ್ಥಳಾಂತರ ಮಾಡಿಸಿದರು. ಸಂತ್ರಸ್ಥರನ್ನು ಭೇಟಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ಬಳಿಕ ಮಾತನಾಡಿ, 15 ವಾರ್ಡ್ ನ ಜೋಡಿರಸ್ತೆಗೆ ಹೊಂದಿಕೊಂಡಂತಿರುವ ರಾಜಕಾಲುವೆಗೆ ಅವೈಜ್ಞಾನಿಕ ಸೇತುವೆ ನಿರ್ಮಾಣ ಮಾಡಿರುವುದ್ದರಿಂದ ಜೋರುಮಳೆಯಾದರೆ ಪದೇಪದೇ ನಮ್ಮ ವಾರ್ಡ್ ನ ಕೆಲಭಾಗ ಜಲಾವೃತಗೊಂಡು ನಿವಾಸಿಗಳು ತುಂಬಾ ತೊಂದರೆಪಡುವಂತಾಗಿದೆ. ಈ.ಸಂಬಂಧ ಅನೇಕ ಬಾರಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಅವರು ವಾರ್ಡ್ ಗೆ ಭೇಟಿ ನೀಡಿ ಪರಿಶೀಲಿಸಿ ಹೋದರೇ ವಿನಾ ಯಾವುದೇ ಕ್ರಮಕೈಗೊಂಡಿಲ್ಲ. ವಾರ್ಡ್ ಅಭಿವೃದ್ದಿ ಹಾಗೂ ನಗರದ ಅಭಿವೃದ್ದಿಗಾಗಿ ಹೋರಾಟ ಮಾಡಿದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ರಾಜಕೀಯ ಮಾಡಿ ನನ್ನ ಮೇಲೆ ದೂರು ದಾಖಲು ಮಾಡಿದ್ದಾರೆ. ನಾವು ವಾರ್ಡ್ ಮತ್ತು ನಗರದ ಅಭಿವೃದ್ದಿಗಾಗಿ ಹೋರಾಟ ಮಾಡುವಂಗಿಲ್ಲವೇ ಎಂದು ಪ್ರಶ್ನಿಸಿದರು.
ಮಳೆನೀರಿನಿಂದ ಸುಮಾರು 100 ಕ್ಕೂ ಹೆಚ್ವು ಮನೆಗಳು ಜಲಾವೃತವಾಗಿದ್ದು, ತುಂಬಾ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಮಳೆಹಾನಿ ಸೂಕ್ತ ಪರಿಹಾರ ಕೊಡಬೇಕು. ಅಲ್ಲದೆ ಇದು ಕೊಳೆಚೆ ಪ್ರದೇಶವಾಗಿರುವುದ್ದರಿಂದ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು , ವಾರ್ಡನ ರಾಜಕಾಲುವೆಗೆ ಅವೈಜ್ಞಾನಿಕ ನಿರ್ಮಿಸಿರುವ ಸೇತುವೆಯನ್ನು ತೆರವುಗೊಳಿಸಬೇಕು ಆರ್.ಪಿ.ನಂಜುಂಡಸ್ವಾಮಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಾರ್ಡ ನಿವಾಸಿಗಳಾದ ಮನೋಜ್, ರವಿ, ಬಸವಣ್ಣ, ಗಣೇಶ ಇತರರು ಹಾಜರಿದ್ದರು.
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…