ಜಿಲ್ಲೆಗಳು

ಜೋರುಮಳೆಗೆ ಸೋಮಣ್ಣ ಲೇಔಟ್ ಜಲಾವೃತ್ತ: ಆಗ್ನಿಶಾಮಕದಳದಿಂದ ವಯೋವೃದ್ದರ ಸ್ಥಳಾಂತರ

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.

ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು.

ನಂತರ  ಆಗ್ನಿಶಾಮಕ ದಳಕ್ಕೆ ಮಾಹಿತಿಕೊಟ್ಟು ಕರೆಸಿ
ಜಲಾವೃತ ಮನೆಗಳಿಂದ ವಯೋವೃದ್ದರನ್ನು   ಸ್ಥಳಾಂತರ ಮಾಡಿಸಿದರು. ಸಂತ್ರಸ್ಥರನ್ನು ಭೇಟಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.


ಬಳಿಕ ಮಾತನಾಡಿ, 15 ವಾರ್ಡ್ ನ ಜೋಡಿರಸ್ತೆಗೆ ಹೊಂದಿಕೊಂಡಂತಿರುವ ರಾಜಕಾಲುವೆಗೆ ಅವೈಜ್ಞಾನಿಕ ಸೇತುವೆ ನಿರ್ಮಾಣ ಮಾಡಿರುವುದ್ದರಿಂದ ಜೋರುಮಳೆಯಾದರೆ ಪದೇಪದೇ ನಮ್ಮ ವಾರ್ಡ್ ನ ಕೆಲಭಾಗ ಜಲಾವೃತಗೊಂಡು ನಿವಾಸಿಗಳು ತುಂಬಾ ತೊಂದರೆಪಡುವಂತಾಗಿದೆ. ಈ.ಸಂಬಂಧ ಅನೇಕ ಬಾರಿ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಅವರು ವಾರ್ಡ್ ಗೆ ಭೇಟಿ ನೀಡಿ ಪರಿಶೀಲಿಸಿ ಹೋದರೇ ವಿನಾ ಯಾವುದೇ ಕ್ರಮಕೈಗೊಂಡಿಲ್ಲ. ವಾರ್ಡ್ ಅಭಿವೃದ್ದಿ ಹಾಗೂ ನಗರದ ಅಭಿವೃದ್ದಿಗಾಗಿ ಹೋರಾಟ ಮಾಡಿದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ರಾಜಕೀಯ ಮಾಡಿ ನನ್ನ ಮೇಲೆ ದೂರು ದಾಖಲು ಮಾಡಿದ್ದಾರೆ.  ನಾವು ವಾರ್ಡ್ ಮತ್ತು ನಗರದ ಅಭಿವೃದ್ದಿಗಾಗಿ ಹೋರಾಟ ಮಾಡುವಂಗಿಲ್ಲವೇ ಎಂದು ಪ್ರಶ್ನಿಸಿದರು.
ಮಳೆನೀರಿನಿಂದ  ಸುಮಾರು 100 ಕ್ಕೂ ಹೆಚ್ವು ಮನೆಗಳು ಜಲಾವೃತವಾಗಿದ್ದು, ತುಂಬಾ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಮಳೆಹಾನಿ ಸೂಕ್ತ ಪರಿಹಾರ ಕೊಡಬೇಕು. ಅಲ್ಲದೆ  ಇದು ಕೊಳೆಚೆ ಪ್ರದೇಶವಾಗಿರುವುದ್ದರಿಂದ ಶಾಶ್ವತ ಮನೆಗಳನ್ನು  ನಿರ್ಮಿಸಿಕೊಡಬೇಕು , ವಾರ್ಡನ ರಾಜಕಾಲುವೆಗೆ ಅವೈಜ್ಞಾನಿಕ ನಿರ್ಮಿಸಿರುವ ಸೇತುವೆಯನ್ನು ತೆರವುಗೊಳಿಸಬೇಕು ಆರ್.ಪಿ.ನಂಜುಂಡಸ್ವಾಮಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಾರ್ಡ ನಿವಾಸಿಗಳಾದ ಮನೋಜ್, ರವಿ, ಬಸವಣ್ಣ, ಗಣೇಶ ಇತರರು ಹಾಜರಿದ್ದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

27 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago