ಜಿಲ್ಲೆಗಳು

ಮಳೆ ಹಾನಿ ಪರಿಹಾರಕ್ಕೆ ವಿಶೇಷ ಪ್ಯಾಕೇಜ್‌ ಕೇಳಿ ಗಮನ ಸೆಳೆದ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ  ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ  ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಪೇಸ್‌ ಬುಕ್‌ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ದರ್ಶನ್‌ ಪುಟ್ಟಣ್ಣಯ್ಯ ಅವರು ಮಂಡ್ಯ ಜಿಲ್ಲೆಯಾದ್ಯಂತ ಕಳೆದ 3 ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು ಸರಿಯಷ್ಟೇ .

264.54 ಹೆಕ್ಟೇರ್ ಕೃಷಿ ಬೆಳೆಹಾನಿ , 707.81 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಹಾನಿ, 259 ಶಾಲೆಗಳಿಗೆ ಹಾನಿ, 535 ಶಾಲಾ ಕೊಠಡಿ ಹಾನಿ, 51 ಸೇತುವೆಗಳು, 25 ಅಂಗನವಾಡಿ ಕೇಂದ್ರಗಳ ಹಾನಿ, 245.4 ಕಿ.ಮೀ. 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ . 1000 ಹೆಚ್ಚು ಮನೆಗಳು ಹಾನಿಯಾಗಿವೆ ಎಂದು ಅಂಕಿ ಅಂಶದ ಸಮೇತ ಅವರು ತಮ್ಮ ಮುಖಪುಟದಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಹಸಿಬರ ಘೋಷಣೆ ಮಾಡಿ ನೊಂದ ಜನರ ಕಣ್ಣೀರು ಒರೆಸುವ ಕೆಲಸ ಮಾಡಿ, ರೈತರ ನೋವಿಗೆ ಸ್ಪಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

36 mins ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

40 mins ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

44 mins ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

54 mins ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

13 hours ago