ಜಿಲ್ಲೆಗಳು

ಮಳೆ ಹಾನಿ ಪರಿಹಾರಕ್ಕೆ ವಿಶೇಷ ಪ್ಯಾಕೇಜ್‌ ಕೇಳಿ ಗಮನ ಸೆಳೆದ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ  ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ  ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಪೇಸ್‌ ಬುಕ್‌ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ದರ್ಶನ್‌ ಪುಟ್ಟಣ್ಣಯ್ಯ ಅವರು ಮಂಡ್ಯ ಜಿಲ್ಲೆಯಾದ್ಯಂತ ಕಳೆದ 3 ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು ಸರಿಯಷ್ಟೇ .

264.54 ಹೆಕ್ಟೇರ್ ಕೃಷಿ ಬೆಳೆಹಾನಿ , 707.81 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಹಾನಿ, 259 ಶಾಲೆಗಳಿಗೆ ಹಾನಿ, 535 ಶಾಲಾ ಕೊಠಡಿ ಹಾನಿ, 51 ಸೇತುವೆಗಳು, 25 ಅಂಗನವಾಡಿ ಕೇಂದ್ರಗಳ ಹಾನಿ, 245.4 ಕಿ.ಮೀ. 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ . 1000 ಹೆಚ್ಚು ಮನೆಗಳು ಹಾನಿಯಾಗಿವೆ ಎಂದು ಅಂಕಿ ಅಂಶದ ಸಮೇತ ಅವರು ತಮ್ಮ ಮುಖಪುಟದಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ತಕ್ಷಣ ಹಸಿಬರ ಘೋಷಣೆ ಮಾಡಿ ನೊಂದ ಜನರ ಕಣ್ಣೀರು ಒರೆಸುವ ಕೆಲಸ ಮಾಡಿ, ರೈತರ ನೋವಿಗೆ ಸ್ಪಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago