ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿರುವ
ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆದ್ದಾರಿ ಉದ್ದಕ್ಕೂ ನಿಂತಿರುವ ಮಳೆನೀರಿನಲ್ಲಿ ವ್ಯಕ್ತಿ ಯೊಬ್ಬ ಮೀನಿನ ಬಲೆ ಎಳೆಯುತ್ತಾ… ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.
ರಸ್ತೆಯ ಒಂದು ಪಾರ್ಶ್ವ ಮಳೆನೀರಿನಿಂದ ಕೂಡಿದ್ದು ಇನ್ನೊಂದು ಪಾರ್ಶ್ವದಲ್ಲಿ ವಾಹನಗಳು ಓಡಾಡುತ್ತಿವೆ. ಮೀನು ಹಿಡಿಯುವುದರೊಂದಿಗೆ ನೀರು ನಿಂತಿರುವ ಹಳ್ಳದತ್ತ ವಾಹನಗಳು ಇಳಿಯದಂತೆ ಈ ಪ್ರತಿಭಟನೆ ಮಾಡುತ್ತಿರುವುದಾಗಿ ಹೇಳಿ ಕೊಂಡಿದ್ದಾರೆ. ರಸ್ತೆ ಎಷ್ಟೊಂದು
ದೊಡ್ಡದಾಗಿ ಹಳ್ಳ ಬಿದ್ದಿದೆ ಎಂಬುದನ್ನು ಮೀನಿನ ಬಲೆಯ ಕಡ್ಡಿಯನ್ನು ಆಳಕ್ಕೆ ತೂರಿಸುವ ಮೂಲಕ ಪ್ರತಿಭಟನೆ ಸಂದರ್ಭದಲ್ಲಿ ಅನಾವರಣಗೊಳಿಸಲಾಗಿದೆ.
ಮೇನ್ ರೋಡಲ್ಲಿ ಮೀನ್ …ಹಿಡಿಯ ಮಟ್ಟಿಗೆ ನೀರು ನಿಂತಿದೆ ಎಂಬುದನ್ನು ಪ್ರತಿಭಟನೆಯೊಂದಿಗೆ ಸಾಕ್ಷೀಕರಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…