ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿರುವ
ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆದ್ದಾರಿ ಉದ್ದಕ್ಕೂ ನಿಂತಿರುವ ಮಳೆನೀರಿನಲ್ಲಿ ವ್ಯಕ್ತಿ ಯೊಬ್ಬ ಮೀನಿನ ಬಲೆ ಎಳೆಯುತ್ತಾ… ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.
ರಸ್ತೆಯ ಒಂದು ಪಾರ್ಶ್ವ ಮಳೆನೀರಿನಿಂದ ಕೂಡಿದ್ದು ಇನ್ನೊಂದು ಪಾರ್ಶ್ವದಲ್ಲಿ ವಾಹನಗಳು ಓಡಾಡುತ್ತಿವೆ. ಮೀನು ಹಿಡಿಯುವುದರೊಂದಿಗೆ ನೀರು ನಿಂತಿರುವ ಹಳ್ಳದತ್ತ ವಾಹನಗಳು ಇಳಿಯದಂತೆ ಈ ಪ್ರತಿಭಟನೆ ಮಾಡುತ್ತಿರುವುದಾಗಿ ಹೇಳಿ ಕೊಂಡಿದ್ದಾರೆ. ರಸ್ತೆ ಎಷ್ಟೊಂದು
ದೊಡ್ಡದಾಗಿ ಹಳ್ಳ ಬಿದ್ದಿದೆ ಎಂಬುದನ್ನು ಮೀನಿನ ಬಲೆಯ ಕಡ್ಡಿಯನ್ನು ಆಳಕ್ಕೆ ತೂರಿಸುವ ಮೂಲಕ ಪ್ರತಿಭಟನೆ ಸಂದರ್ಭದಲ್ಲಿ ಅನಾವರಣಗೊಳಿಸಲಾಗಿದೆ.
ಮೇನ್ ರೋಡಲ್ಲಿ ಮೀನ್ …ಹಿಡಿಯ ಮಟ್ಟಿಗೆ ನೀರು ನಿಂತಿದೆ ಎಂಬುದನ್ನು ಪ್ರತಿಭಟನೆಯೊಂದಿಗೆ ಸಾಕ್ಷೀಕರಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…